ಚಿಕ್ಕಬಳ್ಳಾಪುರ ಮರಳು ಕ್ವಾರಿಯಲ್ಲಿ ಸ್ಫೋಟ 
ರಾಜ್ಯ

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು, Video

ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ: 8 ಜನರ ಸಾವಿಗೆ ಕಾರಣವಾದ ರಾಮನಗರ ಕ್ವಾರಿ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಕ್ವಾರಿ ದುರಂತ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ಧರ್ಮಾವರಂ ಮೂಲದ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬುಧವಾರ ಸಂಜೆ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?

Uttar Pradesh: ಟೋಲ್ ಡಿವೈಡರ್ ಗೆ LPG ಟ್ಯಾಂಕರ್ ಢಿಕ್ಕಿ, ಸ್ಫೋಟ ಕನಿಷ್ಠ 4 ಸಜೀವ ದಹನ, Video Viral

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ, Video