ಡಾ.ಜಿ.ಪರಮೇಶ್ವರ್‌ ಭೇಟಿಯಾದ KDEM ನಿಯೋಗ 
ರಾಜ್ಯ

ರಾಜ್ಯದ ಡಿಜಿಟಲ್ ವ್ಯವಸ್ಥೆಗೆ ಮತ್ತಷ್ಟು ಬಲ: DCM ಡಾ.ಜಿ.ಪರಮೇಶ್ವರ್‌ ಭೇಟಿಯಾದ KDEM ನಿಯೋಗ!

ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ನಿಯೋಗವು ಇಂದು ಉಪ ಮುಖ್ಯಮಂತ್ರಿ ಆಗಿರುವ ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಕರ್ನಾಟಕವನ್ನು ಡಿಜಿಟಲ್ ಪರಿವರ್ತನೆಯ ಕ್ಷೇತ್ರದಲ್ಲಿ ಇನ್ನಷ್ಟು ಮುಂಚೂಣಿಯಲ್ಲಿರಿಸುವ ದೂರದೃಷ್ಟಿ, ಭವಿಷ್ಯದ ಕಾರ್ಯಯೋಜನೆಗಳು ಹಾಗೂ ರಾಜ್ಯದ ಬ್ರ್ಯಾಂಡಿಂಗ್ ಕಾರ್ಯತಂತ್ರದ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಜೊತೆಗೆ, ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಕರ್ನಾಟಕದ ಡಿಜಿಟಲ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜೊತೆಗೆ ನಮ್ಮ ಸರ್ಕಾರ ನಿರಂತರ ಸಹಕಾರ ನೀಡಲಿದೆ ಎಂದು ಡಾ.ಜಿ.ಪರಮೇಶ್ವರ್‌ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷರಾದ ಬಿ.ವಿ. ನಾಯ್ಡು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಗುಪ್ತಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್‌; ʻದಾಸʼನಿಗೆ 1 ವರ್ಷ ಜೈಲೇ ಗತಿ!

'ಬೆಂಗಳೂರು ನನಗೆ ಮೋಸ ಮಾಡಿದೆ' : ಏನಿದು ಬಾಲಿವುಡ್ ನಟಿ ಪಾರುಲ್ ಗುಲಾಟಿ ಆರೋಪ? VIDEO

ಹೈದರಾಬಾದ್‌: ಬಾಯ್​ಫ್ರೆಂಡ್​ಗೆ ವಿಡಿಯೋ ಕಾಲ್ ಮಾಡಿ ಹೋಟೆಲ್‌ನಲ್ಲೇ ವಿವಾಹಿತ ಯುವತಿ ಆತ್ಮಹತ್ಯೆ!

ಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು; ವಿಡಿಯೋ ರಿಲೀಸ್‌

ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...