ಲೋಕಾಯುಕ್ತ ದಾಳಿ 
ರಾಜ್ಯ

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಸುಮಾರು 200 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದನ್ನು ಬಯಲು ಮಾಡಿದೆ.

ಮಂಡ್ಯ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಸುಮಾರು 200 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದನ್ನು ಬಯಲು ಮಾಡಿದೆ. ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ, ADLR ಕಚೇರಿ, ಮಹದೇವಪುರ PDO ಕಚೇರಿ ಮತ್ತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶೋಧ ನಡೆಸಲಾಗಿದೆ.

ಖಾಸಗಿ ವ್ಯಕ್ತಿ ಮತ್ತು ಎಂಟು ಸರ್ಕಾರಿ ನೌಕರರು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ, ADLR ಅಧಿಕಾರಿ ಮೊಹಮ್ಮದ್ ಹುಸೇನ್ ತಲೆಮರೆಸಿಕೊಂಡಿದ್ದು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಖಾಸಗಿ ಡೇಟಾ ಎಂಟ್ರಿ ಆಪರೇಟರ್ ನಿತಿನ್ ಪ್ರೇಮಾನಂದ ಮಹಾಲೆ ಸರ್ಕಾರಿ ಸರ್ವೇಯರ್‌ನಂತೆ ನಟಿಸಿ, ಅಧಿಕೃತ ಬಳಕೆದಾರ ಐಡಿಗಳು, ಪಾಸ್‌ವರ್ಡ್‌ಗಳು ಮತ್ತು OTP ಗಳನ್ನು ಬಳಸಿಕೊಂಡು ನಕಲಿ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಸರ್ಕಾರದ ಮೋಜಿನಿ ಭೂ ಸರ್ವೇ ಸಾಫ್ಟ್‌ವೇರ್‌ ಬಳಸಿದ್ದಾರೆ ಎಂದು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ.

ಶ್ರೀರಂಗಪಟ್ಟಣ ಎಡಿಎಲ್‌ಆರ್ ಕಚೇರಿ ಮತ್ತು ಸಕಲೇಶಪುರ, ಹುಣಸೂರು ಮತ್ತು ಮುಲ್ಬಾಗಲ್‌ನಲ್ಲಿರುವ ಸರ್ವೆ ಕಚೇರಿಗಳಿಗೆ ಸೇರಿದ ಅಧಿಕೃತ ಮುದ್ರೆಗಳನ್ನು ಮೊಹಮ್ಮದ್ ಹುಸೇನ್ ಅವರ ನಿವಾಸಗಳಿಂದ ವಶಪಡಿಸಿಕೊಳ್ಳಲಾಗಿದೆ. ಲೋಕಾಯುಕ್ತ ಅಧಿಕಾರಿಗಳು 1.4 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದು ಹಲವಾರು ಸರ್ವೆ ಅಧಿಕಾರಿಗಳು ಮಹಾಲೆ ಖಾಸಗಿ ವ್ಯಕ್ತಿಯಾಗಿದ್ದರೂ ಅವರಿಗೆ ಹಣ ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ವೈಭವ್ ಸೂರ್ಯವಂಶಿಗೆ ಜಾಸ್ತಿ ಹೈಪ್ ಕೊಡಬೇಡಿ: ಕಪಿಲ್ ದೇವ್ ಹೀಗೆ ಹೇಳಿದ್ಯಾಕೆ ಗೊತ್ತಾ?

ಬೆಂಗಳೂರು: ಡೇಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ; ಇಬ್ಬರು ದಾದಿಯರ ಬಂಧನ

ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು!

ರಾಮ ಮಂದಿರ ಲೂಟಿ ದುರದೃಷ್ಟಕರ; ಇದನ್ನು ಬಳಸಿಕೊಂಡು ಹಿಂದೂ ಧರ್ಮವನ್ನು ಕೆಣಕಲು ಯತ್ನ: ಕೊನೆಗೂ ಮೌನ ಮುರಿದ RSS