ಮಾದಪಟ್ಟಣದ ಕ್ರಷರ್‌ ಬಂಡೆ ಕುಸಿತ ದುರಂತದಲ್ಲಿ ಗಾಯಗೊಂಡವರನ್ನು ಆರ್‌.ಆರ್‌. ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಕಲ್ಲುಗಣಿ ಮಾಲೀಕರಿಗೆ ಸೂಚನೆ, ಗಣಿಗಾರಿಕೆಗೆ ಸಮಗ್ರ ಮಾರ್ಗಸೂಚಿ CM ಡಿ ಕೆ ಶಿವಕುಮಾರ್-Video

ಕಲ್ಲುಗಣಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿತ್ತೇ ಹಾಗೂ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರು: ಕಲ್ಲುಗಣಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಪ್ರಕರಣದಲ್ಲಿ ಅಧಿಕಾರಿಗಳ ವರದಿ ಬಂದ ಬಳಿಕ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವರದಿಯ ಆಧಾರದ ಮೇಲೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕಲ್ಲುಗಣಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿತ್ತೇ ಹಾಗೂ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಂಡೆ ಕುಸಿತವು ಸ್ಫೋಟದಿಂದ ಸಂಭವಿಸಿಲ್ಲ ಎಂಬುದು ಗೊತ್ತಾಗಿದೆ ಎಂದು ಅವರು ಹೇಳಿದರು.

ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕಲ್ಲುಗಣಿ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಲವು ದಿನಗಳ ಹಿಂದೆ ಇದೇ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಚಿರತೆಯೊಂದು ಮೃತಪಟ್ಟಿದ್ದು, ಸಮರ್ಪಕ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂಬ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಈ ವಿಷಯವನ್ನು ಶಾಸಕ ಸರ್ಕಾರದ ಗಮನಕ್ಕೆ ತಂದಿದ್ದಾರೆ. ವರದಿ ಬಂದ ನಂತರವೇ ನಾನು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಲ್ಲುಗಣಿ ನಡೆಸುವವರು ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟರೆ, ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಅಗತ್ಯ ಮಾರ್ಗಸೂಚಿ

ಗಣಿಗಾರಿಕೆ ಕ್ಷೇತ್ರದ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಕಲ್ಲುಗಣಿ ಕಾರ್ಯಾಚರಣೆಗೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವ ಎಲ್ಲ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿನ ಎಲ್ಲಾ ಕಲ್ಲುಗಣಿಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ, ಮುಂದೆ ಎಲ್ಲ ಕಲ್ಲುಗಣಿಗಳೂ ಈ ಮಾರ್ಗಸೂಚಿಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಇಂತಹ ದುರ್ಘಟನೆಗಳು ಮರುಕಳಿಸದಂತೆ ರಾಜ್ಯದ ಎಲ್ಲಾ ಕಲ್ಲುಗಣಿಗಳಿಗೆ ಅನ್ವಯವಾಗುವ ನಿಯಮಗಳನ್ನು ಜಾರಿಗೆ ತರುತ್ತೇವೆ ಎಂದರು.

ಮೃತರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. ಜೊತೆಗೆ, ಕಲ್ಲುಗಣಿ ಮಾಲೀಕರಿಗೂ ಪ್ರತ್ಯೇಕ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

'ಇರಾನ್ ಸಂಪೂರ್ಣ ಮಣಿದಿದೆ', 'ನಮಗೆ ಬೇಕಿದ್ದ ಬಹುತೇಕ ಎಲ್ಲ ಷರತ್ತುಗಳಿಗೆ ಒಪ್ಪಿದೆ': ಟ್ರಂಪ್‌ ಮಹತ್ವದ ಹೇಳಿಕೆ

ಜುಲೈ 4ರಿಂದ ಅಲಿ ಖಮೇನಿ ಅಂತಿಮ ವಿಧಿವಿಧಾನ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ, ಭದ್ರತಾ ಕಾರಣಕ್ಕೆ ಪುತ್ರ ಮೊಜ್ತಬಾ ಗೈರು..!

ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಕಾರ್ಮಿಕರ ಸಾವಿಗೆ ನ್ಯಾಯ ಬೇಕು; ಪರಿಹಾರ, ತನಿಖೆಗೆ ಪ್ರತಿಪಕ್ಷಗಳ ಆಗ್ರಹ

ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭ