ವಿ. ಅನ್ಬುಕುಮಾರ್ 
ರಾಜ್ಯ

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರು: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಿಎಲ್‌ಒಗಳು ಮನೆಗಳಿಗೆ ತೆರಳದೇ ರಸ್ತೆಗಳಲ್ಲಿ ಟೆಂಟ್‌ ಹಾಕಿಕೊಂಡು ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು.

ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಫಾರಂ ಹಂಚುವ ಬದಲು, ಕಚೇರಿಗಳಲ್ಲೇ ಕುಳಿತು ವಿತರಿಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಿಇಒ ವಿ. ಅನ್ಬುಕುಮಾರ್, ಎಲ್ಲಾ ಬಿಎಲ್‌ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆ ಬಾಗಿಲಿಗೆ ಭೇಟಿ ನೀಡಿ ಫಾರಂ ವಿತರಿಸಬೇಕು. ವಿಶೇಷ ತೀವ್ರ ಪರಿಷ್ಕರಣೆಯ ಎಲ್ಲಾ ಹಂತಗಳಲ್ಲೂ ಇಸಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ಅಗತ್ಯ ನಿರ್ದೇಶನ ನೀಡಬೇಕು ಎಂದು ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!