ಗೃಹ ಸಚಿವ ಪ್ರಿಯಾಂಕ್ ಖರ್ಗೆ  
ರಾಜ್ಯ

RSS ಗೆ ಬಿಗ್ ಶಾಕ್: ನಾನು ಇರೋವರೆಗೂ ರಾಜ್ಯದಲ್ಲಿ ​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ; ಪ್ರಿಯಾಂಕ್​​ ಖರ್ಗೆ ಖಡಕ್ ಸೂಚನೆ

ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್​​ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಅವಕಾಶ ಸಿಕ್ಕಾಗಲೆಲ್ಲಾ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಸಂಘಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.

ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕರ್ನಾಟಕ ಸರ್ಕಾರದ ನಡುವೆ ಮತ್ತೊಂದು ಹೊಸ ಸಮರ ಆರಂಭವಾಗುವ ಎಲ್ಲ ಲಕ್ಷಣಗಳೂ ಗೋಚರಿಸಿವೆ.

ಕಲಬುರಗಿಯ ಮಾತನಾಡಿದ ಪ್ರಿಯಾಂಕ್ ಖರ್ಗೆ, ನಾನು ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು ಲೇವಡಿ ಮಾಡಿದ್ದಾರೆ.

ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರು ನನ್ನ ವೈಯಕ್ತಿಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಯಾರನ್ನ ಮದುವೆಯಾಗಿದ್ದಾನೆ? ಆತನ ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ ಅಥವಾ ಬೆಳ್ಳಗಿದ್ದಾನಾ? ಎಂದು ಕೆದಕುತ್ತಿದ್ದಾರೆ.

ಅವರು ಎಷ್ಟೇ ಕೆದಕಿದರೂ ನಾನು ಹೆದರುವ ವ್ಯಕ್ತಿಯಲ್ಲ. ನನ್ನ ಬಣ್ಣದ ಬಗ್ಗೆ ಮಾತನಾಡುವವರಿಗೆ ನನ್ನ ಕೆಲಸಗಳೇ ಉತ್ತರ ನೀಡುತ್ತವೆ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!