ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ಶ್ಲಾಘಿಸಿದ ಕೇಂದ್ರ ಸರ್ಕಾರದ ನಿಯೋಗ!

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.

ಬೆಂಗಳೂರು: ಕರ್ನಾಟಕಕ್ಕೆ ಸೋಮವಾರ ಭೇಟಿ ನೀಡಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉನ್ನತ ಮಟ್ಟದ ನಿಯೋಗ, ಭಾರತ ಸರ್ಕಾರದ ಪ್ರಮುಖ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನವು ರಾಜ್ಯದಲ್ಲಿ ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.

ಉಪ ಮಹಾನಿರ್ದೇಶಕ(ಡಿಡಿಜಿ) ಮತ್ತು ಸಂಖ್ಯಾಶಾಸ್ತ್ರೀಯ ಸಲಹೆಗಾರ ಅಲ್ತಾಫ್ ಹುಸೇನ್ ಹಾಜಿ ನೇತೃತ್ವದ ನಿಯೋಗವು, ರಾಜ್ಯದಲ್ಲಿ ವಿಕ್ಷಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್ ಜಿ) ಕಾರ್ಯಕ್ರಮದ ಅನುಷ್ಠಾನವನ್ನು ಪರಿಶೀಲಿಸಲು, ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತೆ ದಿವ್ಯಾ ಪ್ರಭು ಅವರನ್ನು ಭೇಟಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಯೋಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಅನಿಲ್ ಕುಮಾರ್ ಕೆ ಸಿ ಮತ್ತು ಸಹಾಯಕ ನಿರ್ದೇಶಕ(ಗ್ರಾಮೀಣ ವಸತಿ) ಬಲದೇವ್ ಕುಮಾರ್ ವರ್ಮಾ ಕೂಡ ಇದ್ದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು, ಕೇಂದ್ರ ನಿಯೋಗಕ್ಕೆ ಮಾಹಿತಿ ನೀಡಿ, ಕಾರ್ಯಕ್ರಮದ ಅನುಷ್ಠಾನವು ಯಾವುದೇ ಪ್ರಮುಖ ಅಡೆತಡೆಗಳಿಲ್ಲದೆ ವೇಳಾಪಟ್ಟಿಯ ಪ್ರಕಾರ ನಡೆಯುತ್ತಿವೆ ಎಂದು ಹೇಳಿರುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಅನುಷ್ಠಾನವನ್ನು ಮತ್ತಷ್ಟು ಸುಗಮಗೊಳಿಸಲು ಮತ್ತು ರಾಜ್ಯಾದ್ಯಂತ ಯೋಜನೆಯ ಸುಗಮ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ಆಡಳಿತಾತ್ಮಕ ಮತ್ತು ಕಾರ್ಯವಿಧಾನದ ಕ್ರಮಗಳನ್ನು ಪ್ರಸ್ತುತ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ!

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೆ ಇದೀಗ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್​ಗೆ ಲೀಗಲ್ ನೋಟಿಸ್​!

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌; ಟೆಹ್ರಾನ್ ಹೇಳಿದ್ದೇನು?

ಪಹಲ್ಗಾಮ್ ಭಯೋತ್ಪಾದಕ ದಾಳಿ: ಎನ್‌ಐಎ ಪೂರಕ ಆರೋಪಪಟ್ಟಿಯಲ್ಲಿ LET ಮುಖ್ಯಸ್ಥ ಹಫೀಜ್ ಸಯೀದ್‌ ಹೆಸರು!

Amir Khan 3ನೇ ಮದುವೆ: ಆಮಿರ್​ ಖಾನ್ ಬೆಳ್ಳಿ ಕಾಲುಂಗುರ, ಕಾಲ್ಗೆಜ್ಜೆ ಧರಿಸಿದ್ದೇಕೆ​? ಚರ್ಚೆಗೆ ಗ್ರಾಸವಾದ ಮಿಸ್ಟರ್ ಪರ್ಫೆಕ್ಟ್‌ ವಿವಾಹ!