ಬೀದರ್ ಜಿಲ್ಲೆ ಬಸವಕಲ್ಯಾಣದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದರು. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರ ಪವಿತ್ರ ಕರ್ಮಭೂಮಿ ಹಾಗೂ ಐತಿಹಾಸಿಕ ಅನುಭವ ಮಂಟಪದ ನೆಲ ಎಂಬ ವಿಶೇಷ ಮಹತ್ವ ಹೊಂದಿರುವ ಕಾರಣಕ್ಕೆ ಬಸವಕಲ್ಯಾಣವನ್ನು ಪ್ರವಾಸದ ಆರಂಭಿಕ ತಾಣವಾಗಿ ಸಿಎಂ ಡಿ ಕೆ ಶಿವಕುಮಾರ್ ಆಯ್ಕೆಮಾಡಿಕೊಂಡಿದ್ದಾರೆ.
ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಹೆಸರಾದ ಬಸವಕಲ್ಯಾಣವನ್ನು ಆಧುನಿಕ ಪ್ರಜಾಪ್ರಭುತ್ವದ ತೊಟ್ಟಿಲು ಹಾಗೂ ಬಸವೇಶ್ವರರ ಕರ್ಮಭೂಮಿ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ.
ಪ್ರವಾಸದ ವೇಳೆ ಡಿ.ಕೆ. ಶಿವಕುಮಾರ್, ನಿರ್ಮಾಣ ಹಂತದಲ್ಲಿರುವ ನೂತನ ಅನುಭವ ಮಂಟಪ ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿದರು. ಇದು ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ಜ್ಞಾನ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.
ಈ ಹಿಂದೆ ಕರ್ನಾಟಕ ಸರ್ಕಾರ ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತ್ತು. ಆ ಪರಂಪರೆಯನ್ನು ಮುಂದುವರಿಸುವ ಬದ್ಧತೆಯನ್ನು ಪ್ರಸ್ತುತ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಭೇಟಿಯ ವೇಳೆ ಮುಖ್ಯಮಂತ್ರಿಗಳು ಸ್ಥಳೀಯ ಮಠಾಧೀಶರು, ಶರಣರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ತಳಮಟ್ಟದ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.