ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅಕ್ಕ ಪಡೆ ಸದಸ್ಯರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 
ರಾಜ್ಯ

ಬೀದರ್ ನ ಬಸವ ಕಲ್ಯಾಣ ಮೂಲಕ ಉತ್ತರ ಕರ್ನಾಟಕ ಪ್ರವಾಸ ಆರಂಭಿಸಿದ CM ಡಿ.ಕೆ ಶಿವಕುಮಾರ್; Video

ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಹೆಸರಾದ ಬಸವಕಲ್ಯಾಣವನ್ನು ಆಧುನಿಕ ಪ್ರಜಾಪ್ರಭುತ್ವದ ತೊಟ್ಟಿಲು ಹಾಗೂ ಬಸವೇಶ್ವರರ ಕರ್ಮಭೂಮಿ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ.

ಬೀದರ್ ಜಿಲ್ಲೆ ಬಸವಕಲ್ಯಾಣದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದರು. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರ ಪವಿತ್ರ ಕರ್ಮಭೂಮಿ ಹಾಗೂ ಐತಿಹಾಸಿಕ ಅನುಭವ ಮಂಟಪದ ನೆಲ ಎಂಬ ವಿಶೇಷ ಮಹತ್ವ ಹೊಂದಿರುವ ಕಾರಣಕ್ಕೆ ಬಸವಕಲ್ಯಾಣವನ್ನು ಪ್ರವಾಸದ ಆರಂಭಿಕ ತಾಣವಾಗಿ ಸಿಎಂ ಡಿ ಕೆ ಶಿವಕುಮಾರ್ ಆಯ್ಕೆಮಾಡಿಕೊಂಡಿದ್ದಾರೆ.

ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಹೆಸರಾದ ಬಸವಕಲ್ಯಾಣವನ್ನು ಆಧುನಿಕ ಪ್ರಜಾಪ್ರಭುತ್ವದ ತೊಟ್ಟಿಲು ಹಾಗೂ ಬಸವೇಶ್ವರರ ಕರ್ಮಭೂಮಿ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ.

ಪ್ರವಾಸದ ವೇಳೆ ಡಿ.ಕೆ. ಶಿವಕುಮಾರ್, ನಿರ್ಮಾಣ ಹಂತದಲ್ಲಿರುವ ನೂತನ ಅನುಭವ ಮಂಟಪ ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿದರು. ಇದು ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ಜ್ಞಾನ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.

ಈ ಹಿಂದೆ ಕರ್ನಾಟಕ ಸರ್ಕಾರ ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತ್ತು. ಆ ಪರಂಪರೆಯನ್ನು ಮುಂದುವರಿಸುವ ಬದ್ಧತೆಯನ್ನು ಪ್ರಸ್ತುತ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಭೇಟಿಯ ವೇಳೆ ಮುಖ್ಯಮಂತ್ರಿಗಳು ಸ್ಥಳೀಯ ಮಠಾಧೀಶರು, ಶರಣರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ತಳಮಟ್ಟದ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!