ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಡ್ಡಗಟ್ಟಿ ಕುಟುಂಬದ ಮೇಲೆ ಹಲ್ಲೆ; ಮೂವರ ಬಂಧನ

ಭಾನುವಾರ ರಾತ್ರಿ 10.30ರ ಸುಮಾರಿಗೆ ಮಂಡ್ಯ ಜಿಲ್ಲೆಯ ಮದ್ದೂರು ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತರ ಹಿಂದೆ ಪ್ರಯಾಣಿಸುತ್ತಿದ್ದ ವಾಹನವೊಂದರ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ ಮಂಡ್ಯ ಜಿಲ್ಲೆಯ ಮದ್ದೂರು ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತರ ಹಿಂದೆ ಪ್ರಯಾಣಿಸುತ್ತಿದ್ದ ವಾಹನವೊಂದರ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದರು.

ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಹೆದ್ದಾರಿಯಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸರ ಪ್ರಕಾರ, ಬೆಂಗಳೂರಿನ ನಿವಾಸಿ ಸಾಗರ್ ಎಂದು ಗುರುತಿಸಲಾದ ಸಂತ್ರಸ್ತರು ತನ್ನ ಪತ್ನಿ, ಮಕ್ಕಳು ಮತ್ತು ವೃದ್ಧ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಹೆದ್ದಾರಿ ಮಧ್ಯದಲ್ಲಿ ಸಾಗರ್ ಅವರ ಕಾರನ್ನು ನಿಲ್ಲಿಸಿದ ಪುರುಷರ ಗುಂಪೊಂದು, ಕಾರನ್ನು ಸುತ್ತುವರೆದು, ಅವರನ್ನು ಹೊರಗೆ ಎಳೆದು ರಸ್ತೆಯಲ್ಲಿಯೇ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅವರ ಪತ್ನಿ ಮತ್ತು ಇನ್ನೊಂದು ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಪರಿಸ್ಥಿತಿಯನ್ನು ಶಾಂತಗೊಳಿಸಲು ಮಧ್ಯೆ ಪ್ರವೇಶಿಸಿದರೂ, ಹಲ್ಲೆ ಮುಂದುವರಿದಿದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಸಂಚಾರ ದಟ್ಟಣೆ ನಡುವೆ ಸಾಗರ್ ಅವರ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಈ ಘರ್ಷಣೆ ಪ್ರಾರಂಭವಾಯಿತು. ಡಿಕ್ಕಿಯ ಬಗ್ಗೆ ಎರಡು ವಾಹನಗಳಲ್ಲಿದ್ದವರ ನಡುವೆ ನಡೆದ ವಾಗ್ವಾದ, ಶೀಘ್ರದಲ್ಲೇ ಹಿಂಸಾಚಾರಕ್ಕೆ ತಿರುಗಿತು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಸಾಗರ್ ಸೋಮವಾರ ದೂರು ದಾಖಲಿಸಿದ್ದಾರೆ.

ಹಲ್ಲೆ ನಡೆಸಿದ ಮೂವರನ್ನು ಬಂಧಿಸಲಾಗಿದ್ದು, ಹಲ್ಲೆಯ ನಂತರ ಪರಾರಿಯಾಗಿರುವ ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!