ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯಾದ್ಯಂತ 10 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ರಾಯಚೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿರುವ ಈ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ 10 ಸರ್ಕಾರಿ ಅಧಿಕಾರಿಗಳ ವಿರುದ್ಧ ರಾಜ್ಯ ಲೋಕಾಯುಕ್ತವು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದೆ.

ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ರಾಯಚೂರು, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿರುವ ಈ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತದ ಪ್ರಕಾರ, ದಾಳಿಗೆ ಒಳಗಾದ ಅಧಿಕಾರಿಗಳ ವಿವರ ಹೀಗಿದೆ: ರಾಯಚೂರಿನ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ನ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಚಿತ್ರದುರ್ಗದ ಕೃಷಿ ಇಂಜಿನಿಯರಿಂಗ್ (ತೋಟಗಾರಿಕೆ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಂ. ಶಂಕರ್, ಚಿತ್ರದುರ್ಗದ ಜಲಾನಯನ ಅಭಿವೃದ್ಧಿ ಇಲಾಖೆಯ ವಲಯ ಅರಣ್ಯಾಧಿಕಾರಿ ಬಿ.ಎಚ್ ದುಗ್ಗಪ್ಪ, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ನರೇಂದ್ರ ಕುಮಾರ್, ಇವರಲ್ಲದೆ ಕೆಆರ್‌ಐಡಿಎಲ್ (KRIDL) ಬೆಂಗಳೂರು ವಲಯ ಕಚೇರಿಯ ಅಧೀಕ್ಷಕ ಅಭಿಯಂತರ ಪ್ರವೀಣ್ ಬಿ. ಶ್ರೀಹರಿ ಮತ್ತು ಬೆಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪ ನಿರ್ದೇಶಕರಾದ ಡಿ.ಆರ್. ಪುಷ್ಪ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ತುಮಕೂರಿನ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಎನ್. ಮಧುಸೂದನ್, ಬೆಂಗಳೂರು ದಕ್ಷಿಣದ ಕುಂಬಳಗೋಡು ಪಂಚಾಯತ್‌ನ ಪಿಡಿಒ (PDO) ತಿಮ್ಮೆಗೌಡ, ಶಿವಮೊಗ್ಗದ ಸಂಶೋಧನಾ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರಣ್ ಅಂಗಡಿ ಹಾಗೂ ಕಲಬುರಗಿಯ ಜೆಸ್ಕಾಂ (GESCOM)ನ ಸಹಾಯಕ ಕಾರ್ಯಪಾಲಕ ಅಭಿಯಂತರ (ವಿದ್ಯುತ್) ಅಮೃತ್ ರಾವ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕದಲ್ಲಿ ಶೇ.80ಕ್ಕೂ ಹೆಚ್ಚು SIR ಫಾರಂಗಳನ್ನು ವಿತರಿಸಲಾಗಿದೆ: CEO ಅನ್ಬುಕುಮಾರ್

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

IPL ಮೂಡ್ ನಿಂದ ಹೊರಬನ್ನಿ, ಎಲ್ಲಾ ಪಿಚ್‌ಗಳು ಒಂದೇ ಆಗಿರಲ್ಲ: Team India ಆಟಗಾರರಿಗೆ ಜೋಫ್ರಾ ಆರ್ಚರ್ ಪಾಠ

ಚನ್ನಪಟ್ಟಣ: ತಹಶೀಲ್ದಾರ್‌ಗೆ ಪ್ರಜ್ಞೆ ತಪ್ಪಿಸಿ, ಬಟ್ಟಿ ಬಿಚ್ಚಿ ದೌರ್ಜನ್ಯ,10 ಲಕ್ಷ ರೂ.ಗೆ ಬೇಡಿಕೆ, ಆರೋಪಿ ಬಂಧನ!

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಿಸಿ ಸರ್ಕಾರ ಆದೇಶ!