ಕರ್ನಾಟಕ ಲೋಕಾಯುಕ್ತ ಕಚೇರಿ ಸಾಂದರ್ಭಿಕ ಚಿತ್ರ online desk
ರಾಜ್ಯ

ಲೋಕಾಯುಕ್ತ ದಾಳಿ: 50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆ

ದಾಳಿ ವೇಳೆ ಸರ್ಕಾರಿ ಅಧಿಕಾರಿಗಳು ಹೊಂದಿರುವ 49.83 ಕೋಟಿ ರೂ.ಗಳ ಅಕ್ರಮ ಆಸ್ತಿ (ಡಿಎ) ಪತ್ತೆಯಾಗಿದೆ. ಇದರಲ್ಲಿ 37.95 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಮತ್ತು 11.88 ಕೋಟಿ ರೂ.ಗಳ ಚರಾಸ್ತಿ ಸೇರಿವೆ.

ಬೆಂಗಳೂರು: ಬುಧವಾರ (ಜು.09 ರಂದು) ರಾಜ್ಯಾದ್ಯಂತ 10 ಸರ್ಕಾರಿ ಅಧಿಕಾರಿಗಳ ಕಚೇರಿಗಳು ಮತ್ತು ನಿವಾಸಗಳು ಸೇರಿದಂತೆ 53 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಸರ್ಕಾರಿ ಅಧಿಕಾರಿಗಳು ಹೊಂದಿರುವ 49.83 ಕೋಟಿ ರೂ.ಗಳ ಅಕ್ರಮ ಆಸ್ತಿ (ಡಿಎ) ಪತ್ತೆಯಾಗಿದೆ. ಇದರಲ್ಲಿ 37.95 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಮತ್ತು 11.88 ಕೋಟಿ ರೂ.ಗಳ ಚರಾಸ್ತಿ ಸೇರಿವೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುಂಬಳಗೋಡು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರು 3.50 ಕೋಟಿ ರೂ.ಗಳ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎರಡು ನಿವೇಶನಗಳು, ನಾಲ್ಕು ಮನೆಗಳು, 4 ಎಕರೆ 15 ಗುಂಟೆ ಕೃಷಿ ಭೂಮಿ ಮತ್ತು 84 ಲಕ್ಷ ರೂ.ಗಳ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಹೊಂದಿದ್ದಾರೆ.

ರಾಯಚೂರಿನ ದೇವದುರ್ಗದ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಪಾಟೀಲ್ 6.11 ಕೋಟಿ ರೂ.ಗಳನ್ನು ಸಂಪಾದಿಸಿದ್ದಾರೆ. ಇದು ದಾಳಿಗೊಳಗಾದ 10 ಅಧಿಕಾರಿಗಳ ಅಕ್ರಮ ಆಸ್ತಿಗಳ ಪೈಕಿ ಅತ್ಯಧಿಕ ಮೊತ್ತದ್ದಾಗಿದೆ. ಅವರು 5 ನಿವೇಶನಗಳು, 4 ಮನೆಗಳು, 92 ಎಕರೆ ಕೃಷಿ ಭೂಮಿ ಮತ್ತು 28.79 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಹೊಂದಿದ್ದಾರೆ.

ಬೆಂಗಳೂರಿನ ಕೃಷಿ ಮಾರುಕಟ್ಟೆ ಮಂಡಳಿಯ ಹೆಚ್ಚುವರಿ ನಿರ್ದೇಶಕಿ (ಆಡಳಿತ) ಪುಷ್ಪಾ ಡಿಆರ್, 5.93 ಕೋಟಿ ರೂಪಾಯಿಗಳ ಅಕ್ರಮ ಆಸ್ತಿ ಹೊಂದಿದ್ದರು. ಅವರು ಒಂದು ನಿವೇಶನ, ಮೂರು ಮನೆಗಳು, ಒಂದು ವಾಣಿಜ್ಯ ಕಟ್ಟಡ ಮತ್ತು 35 ಲಕ್ಷ ರೂಪಾಯಿಗಳ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಹೊಂದಿದ್ದಾರೆ.

ಬೆಂಗಳೂರಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ನರೇಂದ್ರ ಕುಮಾರ್ ಎಂ, 5.75 ಕೋಟಿ ರೂಪಾಯಿಗಳ ಡಿಎ ಹೊಂದಿದ್ದಾರೆ. ಅವರು ಮೂರು ಮನೆಗಳು, ನಾಲ್ಕು ಎಕರೆ ಕೃಷಿ ಭೂಮಿ, 1.20 ಕೋಟಿ ರೂಪಾಯಿಗಳ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು 80.16 ಲಕ್ಷ ರೂಪಾಯಿಗಳ ಬ್ಯಾಂಕ್ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ (ಕೆಆರ್‌ಐಡಿಎಲ್) ನ ಸೂಪರಿಂಟೆಂಡೆಂಟ್ ಎಂಜಿನಿಯರ್ ಪ್ರವೀಣ್ ಶ್ರೀಹರಿ, ಎರಡು ನಿವೇಶನಗಳು, ಎರಡು ಮನೆಗಳು ಮತ್ತು 11 ಎಕರೆ ಕೃಷಿ ಭೂಮಿ ಸೇರಿದಂತೆ 4.33 ಕೋಟಿ ರೂಪಾಯಿಗಳ ಅಕ್ರಮ ಆಸ್ತಿ ಹೊಂದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಜಲಾನಯನ ಅಭಿವೃದ್ಧಿ ಇಲಾಖೆಯ ವಲಯ ಅರಣ್ಯ ಅಧಿಕಾರಿ ದುಗ್ಗಪ್ಪ ಬಿ.ಎಚ್. ​​1.95 ಕೋಟಿ ರೂ.; ಚಿತ್ರದುರ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಅಸೋಸಿಯೇಟ್ ಪ್ರೊಫೆಸರ್ ಶಂಕರ ಎಂ (ಕೃಷಿ ಎಂಜಿನಿಯರಿಂಗ್) 1.87 ಕೋಟಿ ರೂ.; ಕಲಬುರಗಿ ಜಿಲ್ಲೆಯ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಮೃತ್ ರಾವ್ 2.65 ಕೋಟಿ ರೂ.; ಶಿವಮೊಗ್ಗದ ಅಂಕೋಲಾ ಅರಣ್ಯ ಇಲಾಖೆಯ ಸಂಶೋಧನಾ ಕೇಂದ್ರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರಣ್ ಅಂಗಡಿ 1.94 ಕೋಟಿ ರೂ.; ಮತ್ತು ತುಮಕೂರು ಜಿಲ್ಲೆಯ ತಿಪಟೂರು ಉಪವಿಭಾಗದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಮಧುಸೂದನ್ ಎನ್ 2.10 ಕೋಟಿ ರೂ. ಅಕ್ರಮ ಆಸ್ತಿ ಹೊಂದಿರುವುದು ದಾಳಿ ವೇಳೆ ಬಹಿರಂಗವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ