ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ರಾಜ್ಯದಲ್ಲಿ ಬರ- ಪ್ರವಾಹ: ಜೆಡಿಎಸ್ ನಿಂದ ನಾಲ್ಕು ಅಧ್ಯಯನ ತಂಡ ರಚನೆ

ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ಬೆಂಗಳೂರು: ರಾಜ್ಯದಲ್ಲಿ 2026ರ ಮುಂಗಾರು ವೈಪಲ್ಯದಿಂದಾಗಿ ಒಂದೆಡೆ ಭಾರಿ ಮಳೆ-ಪ್ರವಾಹದ ಹಾನಿಯಾದರೆ, ಮತ್ತೊಂದೆಡೆ ಶೇ. 40ರಿಂದ ಶೇ. 43 ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ.

ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಹಾವೇರಿ ಮತ್ತು ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅದೇ ಸಮಯದಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ" ಎಂದು ಅವರು ಹೇಳಿದರು. ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ ಬಾಬು ಸಿ.ಬಿ., ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್‌ ಅವರನ್ನೊಳಗೊಂಡಂತೆ ಅಧ್ಯಯನ ತಂಡಗಳು, ಆಯಾ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು / ಮಾಜಿ ಸಚಿವರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಿ ತಳಮಟ್ಟದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕರಾವಳಿ-ಮಲೆನಾಡು ವಿಭಾಗ : ವಿಧಾನಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ (ಅಧ್ಯಕ್ಷರು)

ಬೆಂಗಳೂರು ವಿಭಾಗ: ಕೋಲಾರ ಸಂಸದ ಎಂ. ಮಲ್ಲೇಶ್‌ ಬಾಬು (ಅಧ್ಯಕ್ಷರು)

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ವಿಭಾಗಗಳು : ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, (ಅಧ್ಯಕ್ಷರು)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್