ಬೆಂಗಳೂರು: ರಾಜ್ಯದಲ್ಲಿ 2026ರ ಮುಂಗಾರು ವೈಪಲ್ಯದಿಂದಾಗಿ ಒಂದೆಡೆ ಭಾರಿ ಮಳೆ-ಪ್ರವಾಹದ ಹಾನಿಯಾದರೆ, ಮತ್ತೊಂದೆಡೆ ಶೇ. 40ರಿಂದ ಶೇ. 43 ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ.
ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ.
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಹಾವೇರಿ ಮತ್ತು ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅದೇ ಸಮಯದಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ" ಎಂದು ಅವರು ಹೇಳಿದರು. ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಸಿ.ಬಿ., ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಅವರನ್ನೊಳಗೊಂಡಂತೆ ಅಧ್ಯಯನ ತಂಡಗಳು, ಆಯಾ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು / ಮಾಜಿ ಸಚಿವರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಿ ತಳಮಟ್ಟದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕರಾವಳಿ-ಮಲೆನಾಡು ವಿಭಾಗ : ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ (ಅಧ್ಯಕ್ಷರು)
ಬೆಂಗಳೂರು ವಿಭಾಗ: ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು (ಅಧ್ಯಕ್ಷರು)
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ವಿಭಾಗಗಳು : ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, (ಅಧ್ಯಕ್ಷರು)