ಸೈಕಲ್ ನಲ್ಲಿ ತಿರುಪತಿ ತಲುಪಿದ ಸುರೇಶ್ ಕುಮಾರ್ 
ರಾಜ್ಯ

60ರ ಹರೆಯದಲ್ಲೂ ಸುರೇಶ್ ಕುಮಾರ್ ಸಾಹಸ: ಸೈಕಲ್‌ನಲ್ಲೇ ತಿರುಪತಿ ತಲುಪಿದ ರಾಜಾಜಿನಗರ ಶಾಸಕ!

ಬೆಂಗಳೂರಿನಿಂದ ತಿರುಪತಿ ವೆಂಕಟರಮಣ ಸ್ವಾಮಿ ಸನ್ನಿಧಿವರೆಗಿನ ಒಟ್ಟು 265ಕಿಲೋಮೀಟರ್ ದೂರದ ಹಾದಿಯನ್ನು ಶಾಸಕರು ಮತ್ತು ಅವರ ಸೈಕ್ಲಿಂಗ್ ತಂಡ ಕೇವಲ 14 ಗಂಟೆ 10 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದಾರೆ.

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಅವರು ತಮ್ಮ ತಂಡದೊಂದಿಗೆ ಬೆಂಗಳೂರಿನಿಂದ ಆಂಧ್ರಪ್ರದೇಶದ ತಿರುಪತಿಗೆ ಸೈಕಲ್ ಮೂಲಕವೇ ಪ್ರಯಾಣ ಬೆಳೆಸಿ ಎಲ್ಲರ ಹುಬ್ಬೇರಿಸಿದ್ದಾರೆ.‌

ಬೆಂಗಳೂರಿನಿಂದ ತಿರುಪತಿ ವೆಂಕಟರಮಣ ಸ್ವಾಮಿ ಸನ್ನಿಧಿವರೆಗಿನ ಒಟ್ಟು 265ಕಿಲೋಮೀಟರ್ ದೂರದ ಹಾದಿಯನ್ನು ಶಾಸಕರು ಮತ್ತು ಅವರ ಸೈಕ್ಲಿಂಗ್ ತಂಡ ಕೇವಲ 14 ಗಂಟೆ 10 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದಾರೆ.

ತಮ್ಮ 60ರ ಹರೆಯದಲ್ಲೂ ಯುವಕರಿಗೂ ಮಾದರಿಯಾಗುವಂತೆ ಸೈಕಲ್ ತುಳಿದಿರುವ ಸುರೇಶ್ ಕುಮಾರ್ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಬೆಂಗಳೂರಿನಿಂದ ಹೊರಟ ಈ ಸೈಕ್ಲಿಂಗ್ ತಂಡವು ಹೆದ್ದಾರಿಯ ಕಠಿಣ ಹಾದಿ, ಏರಿಳಿತಗಳನ್ನು ಯಶಸ್ವಿಯಾಗಿ ದಾಟಿ ನಿಗದಿತ ಅವಧಿಗಿಂತ ಮುನ್ನವೇ ತಿರುಪತಿ ಬೆಟ್ಟದ ತಪ್ಪಲನ್ನು ತಲುಪಿದೆ.

10 ಜನರ ತಂಡದ ಜೊತೆ ಸುರೇಶ್ ಕುಮಾರ್ ಸೈಕಲ್​ನಲ್ಲಿ ತೆರಳಿದ್ದು, ಈ ಟೀಂ ಸತತ 3ನೇ ಬಾರಿಗೆ ತಿರುಪತಿಗೆ ಸೈಕ್ಲಿಂಗ್ ಮಾಡಿದೆ. ಬಸವೇಶ್ವರದಿಂದ ರಾಜಾಜಿನಗರ ಒಂದನೇ ಬ್ಲಾಕ್, ಯಶವಂತಪುರ, ಬಿ ಇ ಎಲ್ ವೃತ್ತ, ಅವಲಳ್ಳಿ ಅರಣ್ಯ ಪ್ರದೇಶ, ರಾಜಾನುಕುಂಟೆ, ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ, ದೇವನಹಳ್ಳಿ, ವಿಜಯಪುರ, ಕೈವಾರ, ಮದನಪಲ್ಲಿ, ಪೀಲೇರು ಮಾರ್ಗವಾಗಿ ಸಾಗಿ ತಿರುಪತಿ ತಲುಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!