ಅಯೋಧ್ಯೆ ರಾಮಮಂದಿರ  
ರಾಜ್ಯ

'ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಕಳ್ಳತನ ಘಟನೆ ನೋವು ತಂದಿದೆ': RSS

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮನವಿಯ ಮೇರೆಗೆ ಆರಂಭಿಸಲಾದ ಎಸ್‌ಐಟಿ ಮತ್ತು ಪೊಲೀಸರ ತನಿಖೆ ನಿರ್ಣಾಯಕ ತಿರುವು ಪಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು ಎಂದು ಆರ್‌ಎಸ್‌ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗಾವಿಯಲ್ಲಿ ನಡೆದ ಮೂರು ದಿನಗಳ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಬೈಠಕ್‌ನ ಸಮಾರೋಪದ ದಿನವಾದ ಇಂದು ಭಾನುವಾರ, ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಹಣ ಎಣಿಕೆಯಲ್ಲಿ ನಡೆದಿರುವ ಆರೋಪಿತ ಅಕ್ರಮಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತೀವ್ರ ವಿಷಾದ ವ್ಯಕ್ತಪಡಿಸಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಮತ್ತು ಪೊಲೀಸರ ಕ್ರಮ ಶೀಘ್ರದಲ್ಲೇ ನಿರ್ಣಾಯಕ ಹಂತ ತಲುಪಲಿದೆ ಎಂಬ ವಿಶ್ವಾಸವನ್ನೂ ಸಂಘ ವ್ಯಕ್ತಪಡಿಸಿದೆ.

ಸಭೆಯಲ್ಲಿ ರಾಮಮಂದಿರ ಹುಂಡಿ ಹಣ ಎಣಿಕೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಎಲ್ಲರೂ ದುಃಖ ವ್ಯಕ್ತಪಡಿಸಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮನವಿಯ ಮೇರೆಗೆ ಆರಂಭಿಸಲಾದ ಎಸ್‌ಐಟಿ ಮತ್ತು ಪೊಲೀಸರ ತನಿಖೆ ನಿರ್ಣಾಯಕ ತಿರುವು ಪಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು ಎಂದು ಆರ್‌ಎಸ್‌ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತೀರ್ಥ ಕ್ಷೇತ್ರ ಟ್ರಸ್ಟ್ ಸೂಕ್ತ ಕ್ರಮ ಕೈಗೊಂಡು, ರಾಮಮಂದಿರದ ಬಗ್ಗೆ ದೇಶದ ಕೋಟ್ಯಂತರ ರಾಮಭಕ್ತರಲ್ಲಿ ಇರುವ ಭಕ್ತಿ ಮತ್ತು ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂಬ ನಿರೀಕ್ಷೆಯನ್ನೂ ಸಂಘ ವ್ಯಕ್ತಪಡಿಸಿದೆ.

ಜೂನ್‌ನಲ್ಲಿ ಬೆಳಕಿಗೆ ಬಂದಿತ್ತು ಅಕ್ರಮ

ರಾಮಮಂದಿರದ ಹುಂಡಿ ಹಣ ದುರ್ಬಳಕೆಯ ಆರೋಪವು ಜೂನ್‌ 7ರಂದು ಬೆಳಕಿಗೆ ಬಂದಿತ್ತು. ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ಎಸ್‌ಐಟಿ ಸಲ್ಲಿಸಿದ ಪ್ರಾಥಮಿಕ ವರದಿಯ ಆಧಾರದ ಮೇಲೆ ಜೂನ್‌ 25ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಹುಂಡಿ ಸಂಗ್ರಹ ಹಾಗೂ ಹಣ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ವಾರ್ಷಿಕ ಸಭೆಯಲ್ಲಿ ಹಲವು ಮಹತ್ವದ ಚರ್ಚೆಗಳು

ಜುಲೈ 10ರಿಂದ 12ರವರೆಗೆ ನಡೆದ ಈ ಮೂರು ದಿನಗಳ ಸಭೆಯು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್, ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ 226 ಕಾರ್ಯಕರ್ತರ ಉಪಸ್ಥಿತಿಯಲ್ಲಿ ಮುಕ್ತಾಯಗೊಂಡಿತು.

ಮಾರ್ಚ್‌ 2026ರ ನಂತರ ದೇಶಾದ್ಯಂತ ನಡೆದ ತರಬೇತಿ ಶಿಬಿರಗಳ ಪರಿಶೀಲನೆ ನಡೆಸಲಾಯಿತು. ದೇಶದಾದ್ಯಂತ 83 ಸಂಘ ಶಿಕ್ಷಣ ವರ್ಗಗಳು ಹಾಗೂ 12 ಕಾರ್ಯಕರ್ತ ಅಭಿವೃದ್ಧಿ ವರ್ಗಗಳು ಆಯೋಜಿಸಲ್ಪಟ್ಟಿದ್ದು, ಒಟ್ಟು 18,842 ಸ್ವಯಂಸೇವಕರು ತರಬೇತಿ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ತರಬೇತಿಗಳಲ್ಲಿ ದೈನಂದಿನ ಶಾಖೆ, ಸಂಘದ ಕಾರ್ಯಪದ್ಧತಿ, ಗ್ರಾಮ ಅಭಿವೃದ್ಧಿ, ಕುಟುಂಬ ಪ್ರಬೋಧನ, ವಿಪತ್ತು ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಹಲವು ವಿಷಯಗಳನ್ನು ಒಳಗೊಂಡಿದ್ದವು.

ಶತಮಾನೋತ್ಸವ ಕಾರ್ಯಕ್ರಮಗಳ ಪರಿಶೀಲನೆ

ಸಭೆಯಲ್ಲಿ ಶಾಖಾ ಮಟ್ಟದಲ್ಲಿ ಕಾರ್ಯಯೋಜನೆಗಳನ್ನು ಜಾರಿಗೆ ತರುವುದು, ಸೆಪ್ಟೆಂಬರ್‌ನಲ್ಲಿ ಶಾಖಾ ವಿಸ್ತಾರ ಯೋಜನೆ ಅಡಿಯಲ್ಲಿ ಹೊಸ ಶಾಖೆಗಳನ್ನು ಆರಂಭಿಸುವುದು, ಸಂಘದ ಶತಮಾನೋತ್ಸವದ ಅಂಗವಾಗಿ ಈಗಾಗಲೇ ನಡೆದ ಕಾರ್ಯಕ್ರಮಗಳ ಪರಿಶೀಲನೆ ಹಾಗೂ ಉಳಿದ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.

ಶತಮಾನೋತ್ಸವ ಕಾರ್ಯಕ್ರಮಗಳ ಮೂಲಕ ಸಂಪರ್ಕಕ್ಕೆ ಬಂದ ಜನರನ್ನು ಸಾಮಾಜಿಕ ಸೇವಾ ಕಾರ್ಯಗಳು ಮತ್ತು ಪಂಚ ಪರಿವರ್ತನ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಯೋಜನೆಗಳ ಕುರಿತೂ ಚರ್ಚೆ ನಡೆಯಿತು.

ಇದೇ ವೇಳೆ, 2026–27ನೇ ಸಾಲಿನ ಮೋಹನ್ ಭಾಗವತ್ ಅವರ ಪ್ರವಾಸ ಕಾರ್ಯಕ್ರಮವನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು.

ಜನಸಂಖ್ಯೆ ಅಸಮತೋಲನ, ಮಾದಕ ವ್ಯಸನ ಕುರಿತು ಚರ್ಚೆ

ಸಭೆಯಲ್ಲಿ ಜನಗಣತಿ, ಜನಸಂಖ್ಯೆ ಅಸಮತೋಲನದಿಂದ ಉಂಟಾಗುತ್ತಿರುವ ಸವಾಲುಗಳು, ಹೆಚ್ಚುತ್ತಿರುವ ಮಾದಕ ವ್ಯಸನ ಹಾಗೂ ವ್ಯಸನಮುಕ್ತಿಗೆ ಆದ್ಯತೆ ನೀಡುವ ಅಗತ್ಯದ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.

ಇದರ ಜೊತೆಗೆ ಸಂತ ಶಿರೋಮಣಿ ರವಿದಾಸ್ ಮಹಾರಾಜರ 650ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..