ಮಂಡ್ಯದಲ್ಲಿ ರೈತರ ಪ್ರತಿಭಟನೆ  
ರಾಜ್ಯ

KRS ನಿಂದ ನೀರು ಬಿಡುಗಡೆ ವಿಳಂಬ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

ವಿವಿಧ ರೈತ ಸಂಘಟನೆಗಳ ಸದಸ್ಯರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಹಳೆಯ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ತಡೆದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನೀರಾವರಿಗಾಗಿ ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಮೈಸೂರು: ಕೃಷ್ಣರಾಜ ಸಾಗರ (KRS) ಜಲಾಶಯದಿಂದ ನೀರಾವರಿಗಾಗಿ ರಾಜ್ಯ ಸರ್ಕಾರ ಇನ್ನೂ ನೀರು ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿತು. ನೀರು ಬಿಡುಗಡೆ ವಿಳಂಬವಾಗುತ್ತಿರುವುದರಿಂದ ಕಬ್ಬು ಸೇರಿದಂತೆ ನಿಂತ ಬೆಳೆಗಳು ಒಣಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿವಿಧ ರೈತ ಸಂಘಟನೆಗಳ ಸದಸ್ಯರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಹಳೆಯ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ತಡೆದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನೀರಾವರಿಗಾಗಿ ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯ ಭಾಗವಾಗಿ ಹಲವು ರೈತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದರು. ಜಲಾಶಯದಲ್ಲಿ ಸುಮಾರು 90 ಅಡಿ ನೀರು ಇದ್ದರೂ ಸರ್ಕಾರ ತಮ್ಮ ಸಂಕಷ್ಟವನ್ನು ಕಡೆಗಣಿಸಿದೆ ಎಂದು ಆರೋಪಿಸಿದರು. ಇನ್ನಷ್ಟು ವಿಳಂಬವಾದರೆ ಬೆಳೆಗಳಿಗೆ ಸರಿಪಡಿಸಲಾಗದಷ್ಟು ಹಾನಿಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ನೀರಾವರಿಗಾಗಿ ನೀರು ನೀಡದೆ, ಆರನೇ ಹಂತದ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡುತ್ತಿರುವುದನ್ನು ಅವರು ತೀವ್ರವಾಗಿ ವಿರೋಧಿಸಿದರು. ಕೃಷಿಗೆ ನೀರು ಒದಗಿಸಲು ಸಾಧ್ಯವಾಗದಿದ್ದರೆ ಸರ್ಕಾರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನವನ್ನು ಮರುಪರಿಶೀಲಿಸಬೇಕು ಎಂದು ರೈತ ಸಂರಕ್ಷಣಾ ಸಮಿತಿ ಪ್ರತಿನಿಧಿಗಳು ಆಗ್ರಹಿಸಿದರು. ತಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಬೆಳೆಗಳು ಒಣಗುತ್ತಿದ್ದರೂ ಆಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾವೇರಿ ನೀರಾವರಿ ವ್ಯವಸ್ಥೆಯನ್ನು ಅವಲಂಬಿಸಿರುವ ಸಾವಿರಾರು ರೈತರ ಜೀವನೋಪಾಯವನ್ನು ಉಳಿಸಲು ಯಾವುದೇ ವಿಳಂಬವಿಲ್ಲದೆ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪಾಂಡವಪುರ ಶಾಸಕ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ಕಾರ್ಯಾಧ್ಯಕ್ಷ ದರ್ಶನ್ ಪುಟ್ಟಣ್ಣಯ್ಯ, ಕುಡಿಯುವ ನೀರು ಹಾಗೂ ನೀರಾವರಿ ಉದ್ದೇಶಗಳಿಗೆ ಕೆಆರ್‌ಎಸ್‌ನಿಂದ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಶ್ರೀರಂಗಪಟ್ಟಣ ಶಾಸಕ ರವಿ ಗಣಿಗ, ನಾಳೆ ನಡೆಯಲಿರುವ ಕಾವೇರಿ ಸಂಬಂಧಿತ ವಿಚಾರಣೆಯ ಬಳಿಕ ನೀರು ಬಿಡುಗಡೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ (KRRS) ಮಂಡ್ಯ ಜಿಲ್ಲಾ ಘಟಕವು ಇಂದು ಬೆಳಗ್ಗೆ 11 ಗಂಟೆಯಿಂದ ಕೆಆರ್‌ಎಸ್ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಅನಿರ್ದಿಷ್ಟಾವಧಿಯ ಹಗಲು-ರಾತ್ರಿ ಧರಣಿ ಆರಂಭಿಸುವುದಾಗಿ ಘೋಷಿಸಿದೆ. ನೀರು ಬಿಡುಗಡೆ ಮಾಡುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಕೆಆರ್‌ಆರ್‌ಎಸ್ ಮುಖಂಡರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ, 2 ದಿನಗಳಲ್ಲಿ ಸ್ಪಷ್ಟ ಚಿತ್ರಣ

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್; 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!