ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  
ರಾಜ್ಯ

'ಜೀವನಾಧಾರವಾಗಿರುವ ಭೂಮಿ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಯಾರ ಉದ್ಧಾರಕ್ಕೆ? ಮಹಿಳೆಯರ ಪೊರಕೆ ಸೇವೆ ಸರ್ಕಾರಕ್ಕೆ ಎಚ್ಚರಿಕೆ'

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ನವದೆಹಲಿ: ಬಿಡದಿ ಟೌನ್‌ಶಿಪ್ ಗೆಂದು ಜಂಟಿ ಮಾಪನ ಸಮೀಕ್ಷೆಗೆ ಹೋದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಿಂದ ಥಳಿಸಿರುವ ಘಟನೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಬಿಡದಿ ಟೌನ್‌ಶಿಪ್ ನೆಪದಲ್ಲಿ ಅನ್ನದಾತರ ಜಮೀನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಅತಿರೇಕದ್ದಾಗಿದೆ. ಹಾಗಾಗಿ, ರೈತ ಮಹಿಳೆಯರು ಪೊರಕೆ ಕೈಗೆ ತೆಗೆದುಕೊಂಡಿದ್ದಾರೆ. ಸರ್ಕಾರ ಇನ್ನಾದರೂ ಕಣ್ತೆರೆದುಕೊಳ್ಳಬೇಕಿದೆ.

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ರೈತರ ಬಗ್ಗೆ ಕಾಳಜಿಯೇ ಇಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಮುನ್ನುಗ್ಗುತ್ತಿರುವುದು ದುರಾಡಳಿತದ ಪರಮಾವಧಿ ಎಂದು ಕಿಡಿ ಕಾರಿದ ಜೋಶಿ, ರೈತರ ಒಪ್ಪಿಗೆಯಿಲ್ಲದೆ ಅವರ ಜೀವನಾಧಾರವಾಗಿರುವ ಭೂಮಿಯನ್ನೇ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಅಭಿವೃದ್ಧಿ ಯಾರ ಉದ್ಧಾರಕ್ಕಾಗಿ? ಎಂದು ಪ್ರಶ್ನಿಸಿದ್ದಾರೆ.

ಶಾಂತಿಯುತ ಬದುಕು ನೂಕುತ್ತಿರುವ ರೈತರನ್ನು ಹೆದರಿಸಿ, ಬೆದರಿಸಿ ಜಮೀನು ವಶಪಡಿಸಿಕೊಳ್ಳಲು ಯತ್ನಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಮುಗ್ಧ ರೈತರನ್ನು ಬೆದರಿಸಿ, ಪೊಲೀಸ್ ಬಲ ಬಳಸಿ ಜಮೀನು ಕಿತ್ತುಕೊಳ್ಳಬಹುದು ಎಂದುಕೊಂಡಿದ್ದರೆ ಅದು ಭ್ರಮೆ ಎಂದು ಸರ್ಕಾರಕ್ಕೆ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಇದು ಕೇವಲ ಬಿಡದಿ ರೈತರ ಹೋರಾಟವಲ್ಲ, ರಾಜ್ಯದ ಸಮಸ್ತ ಜನತೆಯ ಆಕ್ರೋಶ. ರೈತರ ಭೂಮಿ ಅವರ ಹಕ್ಕು, ಅವರ ಬೆಂಬಲವಿಲ್ಲದೆ, ಅವರ ಭೂಮಿಯನ್ನು ಕಿತ್ತುಕೊಳ್ಳುವುದು ಸರಿಯಲ್ಲ. ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದೂ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ, 2 ದಿನಗಳಲ್ಲಿ ಸ್ಪಷ್ಟ ಚಿತ್ರಣ

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್; 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!