ಮಾಜಿ ಸಂಸದ ಹನುಮಂತಪ್ಪ ಅಂತ್ಯಕ್ರಿಯೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಚಿತ್ರದುರ್ಗ: ರಾಜ್ಯ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಂಸದ ಹೆಚ್ ಹನುಮಂತಪ್ಪ ಅಂತ್ಯಕ್ರಿಯೆ, ಸಿಎಂ-ಡಿಸಿಎಂ ಭಾಗಿ-Video

ಹಳೆಯ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, "1979-80ರಿಂದ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ನಾವು ನೆರೆಹೊರೆಯವರಾಗಿದ್ದೆವು. ಅವರೊಂದಿಗೆ ರಾಜಕೀಯವಾಗಿ ಬೆಳೆದ ನಮ್ಮೆಲ್ಲರಿಗೂ ಅವರ ನಿಧನ ತೀವ್ರ ದುಃಖ ತಂದಿದೆ," ಎಂದರು.

ಚಿತ್ರದುರ್ಗ: ರಾಜ್ಯಸಭೆಯ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರು ಮೂರು ಅವಧಿಗಳ ಕಾಲ ರಾಜ್ಯಸಭಾ ಸದಸ್ಯರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಆಪ್ತ ಸಹಚರರಾಗಿದ್ದ ಅವರು ರಾಷ್ಟ್ರೀಯ ಮಟ್ಟದಲ್ಲೂ ಮಾರ್ಗದರ್ಶನ ನೀಡಿದ್ದರು. ಅವರು ಇಂದು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಆದರ್ಶಗಳು ಎಂದೆಂದಿಗೂ ಜೀವಂತವಾಗಿರುತ್ತವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನಿನ್ನೆ ಸೋಮವಾರ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಳೆಯ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, "1979-80ರಿಂದ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ನಾವು ನೆರೆಹೊರೆಯವರಾಗಿದ್ದೆವು. ಅವರೊಂದಿಗೆ ರಾಜಕೀಯವಾಗಿ ಬೆಳೆದ ನಮ್ಮೆಲ್ಲರಿಗೂ ಅವರ ನಿಧನ ತೀವ್ರ ದುಃಖ ತಂದಿದೆ," ಎಂದರು.

ಹನುಮಂತಪ್ಪ ಅವರು ಅತ್ಯಂತ ಸರಳ ಮತ್ತು ಘನತೆಯ ಜೀವನ ನಡೆಸಿದರು. ಎಸ್. ನಿಜಲಿಂಗಪ್ಪ ಅವರ ತತ್ವಗಳನ್ನು ಹಾಗೂ ತಮ್ಮ ವೈಚಾರಿಕ ನಿಲುವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರು. ಜಿಲ್ಲೆಯ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಕ್ಷಕ್ಕೆ ಸ್ವಂತ ಕಚೇರಿ ಕಟ್ಟಡ ಇರಬೇಕೆಂದು ಮೊದಲ ಬಾರಿಗೆ ಧ್ವನಿ ಎತ್ತಿದವರೂ ಅವರೇ ಎಂದು ಶಿವಕುಮಾರ್ ಹೇಳಿದರು.

ಚಿತ್ರದುರ್ಗದ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಬರಲು ಹನುಮಂತಪ್ಪ ಅವರು ನಿರಂತರ ಹೋರಾಟ ನಡೆಸಿದ್ದರು.

ಜಿಲ್ಲೆಯಲ್ಲಿ ಹಲವು ಮಹತ್ವದ ಕೃಷಿ ಯೋಜನೆಗಳ ಅನುಷ್ಠಾನಕ್ಕೂ ಅವರು ಶ್ರಮಿಸಿದರು. ಜಿಲ್ಲೆಯ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಹಾಗೂ ಸರ್ಕಾರದ ಮುಂದೆ ನಿರಂತರವಾಗಿ ಪ್ರಸ್ತಾಪಿಸಿ, ಸಮಗ್ರ ಅಭಿವೃದ್ಧಿಗಾಗಿ ಹೋರಾಡಿದ ಕಾರಣ ಅವರಿಗೆ 'ಭಗೀರಥ' ಎಂಬ ಹೆಗ್ಗಳಿಕೆ ದೊರಕಿತ್ತು ಎಂದು ಮುಖ್ಯಮಂತ್ರಿ ಹೇಳಿದರು.

ಅವರು ರೈಲ್ವೆ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಬಳಿಕ ರಾಜ್ಯಸಭಾ ಸದಸ್ಯರಾಗಿ ಅತ್ಯುತ್ತಮವಾಗಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಆಪ್ತರಾಗಿದ್ದ ಅವರು ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಅಪಾರ ಜನಸೇವೆ ಸಲ್ಲಿಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಸ್ಮರಿಸಿದರು.

ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಂಸದರಾದ ಗೋವಿಂದ ಎಂ. ಕಾರಜೋಳ ಮತ್ತು ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಕೆ.ಸಿ. ವೀರೇಂದ್ರ, ಆರ್.ಬಿ. ತಿಮ್ಮಾಪುರ, ಅಬ್ಬಯ್ಯ ಪ್ರಸಾದ್ ಹಾಗೂ ಬಸಂತಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಎಸ್. ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಶಂಕರ್ ಬಿದರಿ, ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಆಕಾಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹನುಮಂತಪ್ಪ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಅವರ ಪುತ್ರ ಜಿ.ಹೆಚ್. ಮೋಹನ್ ಅವರಿಗೆ ಹಸ್ತಾಂತರಿಸಿದರು. ನಗರದಲ್ಲಿನ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪೊಲೀಸ್ ಇಲಾಖೆ ಮೂರು ಸುತ್ತಿನ ಗುಂಡಿನ ಗೌರವ ಸಲ್ಲಿಸಿತು. ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ಬಳಿಕ ಪುತ್ರ ಮೋಹನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಹನುಮಂತಪ್ಪ ಅವರು ಸದಾ ಪಕ್ಷದ ಕಾರ್ಯಕರ್ತರ ಹಿತಾಸಕ್ತಿಯ ಬಗ್ಗೆ ಕಾಳಜಿ ವಹಿಸುತ್ತಿದ್ದರು. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಎಲ್ಲ ಗೌರವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ, 2 ದಿನಗಳಲ್ಲಿ ಸ್ಪಷ್ಟ ಚಿತ್ರಣ

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್; 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!