ಪುಟ್ ಪಾತ್ ಒತ್ತುವರಿ ತೆರವು 
ರಾಜ್ಯ

GBA: ಬೆಂಗಳೂರಿನಲ್ಲಿ ಜುಲೈ1 ರಿಂದ 10 ರವರೆಗೆ 490 ಕಿ.ಮೀ.ಉದ್ದದ ಫುಟ್ ಪಾತ್ ಒತ್ತುವರಿ ತೆರವು!

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 122.62 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಲಾಗಿದೆ.

ಬೆಂಗಳೂರು: ಜುಲೈ 1 ರಿಂದ 10 ರವರೆಗಿನ 10 ದಿನಗಳ ವಿಶೇಷ ಅಭಿಯಾನದ ಸಂದರ್ಭದಲ್ಲಿ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 490.55 ಕಿ.ಮೀ. ಉದ್ದದ ಪಾದಚಾರಿ ಮಾರ್ಗಒತ್ತುವರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತೆರವುಗೊಳಿಸಿದೆ.

ಈ ಕುರಿತ ಮಾಹಿತಿಯನ್ನು ಜಿಬಿಎ ಹಂಚಿಕೊಂಡಿದ್ದು, ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 122.62 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಿದ್ದು, ಉತ್ತರ ನಗರಪಾಲಿಕೆ ವ್ಯಾಪ್ತಿಯಲ್ಲಿ 115.35 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಲಾಗಿದ್ದು, ಎರಡನೇ ಸ್ಥಾನದಲ್ಲಿದೆ.

ಬೆಂಗಳೂರು ದಕ್ಷಿಣ ನಗರಪಾಲಿಕೆಯಲ್ಲಿ 94.01 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲಾಗಿದ್ದರೆ, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 88 ಕಿ.ಮೀ. ಮತ್ತು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 70 ಕಿ.ಮೀ. ಉದ್ದದ ಅತಿಕ್ರಮಣವನ್ನು ತೆರವುಗೊಳಿಸಲಾಗಿದೆ.

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗಾಗಿ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಅವುಗಳ ನಡುವೆಯೂ ಪುಟ್ ಪಾತ್ ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗಿದ್ದು, ನಿಜವಾದ ಬದಲಾವಣೆಗೆ ಕಠಿಣ ನಿರ್ಧಾರಗಳು ಬೇಕಾಗುತ್ತವೆ. ಜನರ ಬೆಂಬಲದೊಂದಿಗೆ, ಸುರಕ್ಷಿತ, ಸ್ವಚ್ಛ ಮತ್ತು ಹೆಚ್ಚು ವಾಸಿಸಲು ಯೋಗ್ಯವಾದ ಬೆಂಗಳೂರನ್ನು ನಿರ್ಮಿಸಬಹುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬದಲಾವಣೆಯು ಟೀಕೆಗೆ ಕಾರಣವಾಗಬಹುದು, ಆದರೆ ಅದು ಲಕ್ಷಾಂತರ ಜನರ ಜೀವನವನ್ನು ಸುಧಾರಿಸಿದರೆ ಅದು ಯೋಗ್ಯ ಬೆಲೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಮಂದಿರಕ್ಕೆ ಸಂಬಂಧಿಸಿದ ವಿವಾದಕ್ಕೆ ಸುಪ್ರೀಂ ಎಂಟ್ರಿ; ಮುಸ್ಲಿಮರಿಗೂ ನಮಾಜ್ ಮಾಡಲು ಅವಕಾಶ

50 ಲಕ್ಷ ವರದಕ್ಷಿಣೆಗಾಗಿ ಕಿರುಕುಳ: ಪತ್ನಿಯನ್ನು ಕೊಲ್ಲಲು ಮಚ್ಚು ಹಿಡಿದು ಅಟ್ಟಾಡಿಸಿದ PSI ಭೈರಪ್ಪ ಕೊನೆಗೂ ಬಂಧನ!

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ; ಮಂಗಳೂರು ನಾವಿಕನ ರಕ್ಷಣೆ, ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!

ಅಪಾರ್ಟ್ ಮೆಂಟ್ ನಿರ್ವಹಣೆ -ಮಾಲೀಕತ್ವ ಕುರಿತು ಹೊಸ ಕಾಯ್ದೆ ಜಾರಿಗೆ ಸರ್ಕಾರ ಒಲವು: ಜು.15ಕ್ಕೆ CM ಡಿ ಕೆ ಶಿವಕುಮಾರ್ ಸಮಾಲೋಚನಾ ಸಭೆ-Video

'ಸಿದ್ದರಾಮಯ್ಯ ಕೆಳಗಿಳಿಸಿ CM ಆಗಲು ಹೈಕಮಾಂಡ್‌ಗೆ ಏನು ಮಾತು ಕೊಟ್ಟಿದ್ದೀರೋ ಗೊತ್ತಿಲ್ಲ: ಅದಕ್ಕಾಗಿ ರೈತರ ಬದುಕು ಬಲಿ ಕೊಡಬೇಡಿ'; ಡಿಕೆಶಿ ವಿರುದ್ಧ ದೇವೇಗೌಡ ವಾಗ್ದಾಳಿ