ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ದಾಂಧಲೆ 
ರಾಜ್ಯ

ಬೆಂಗಳೂರು: ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ದಾಂಧಲೆ; ಎರಡು ಗುಂಪುಗಳ ನಡುವೆ ಮಾರಾಮಾರಿ!

ಕೆಲವು ಕಿಡಿಗೇಡಿಗಳು ಮದರಸಾ ಜಾಗದ ವಿಚಾರಕ್ಕೆ, ಸಾಮರ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ನುಗ್ಗಿ, ಕಿಟಕಿ ಗಾಜುಗಳನ್ನು ಒಡೆದು ದಾಂಧಲೆ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಥಣಿಸಂದ್ರದ ನಾರಾಯಣಪುರದಲ್ಲಿ ಮಂಗಳವಾರ ಮದರಸಾ ಜಾಗದ ವಿಚಾರಕ್ಕೆ ಪುಂಡರು ಖಾಸಗಿ ಶಾಲೆಗೆ ನುಗ್ಗಿ ದಾಂಧಲೆ ನಡೆಸಿದ್ದು, ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಕೆಲವು ಕಿಡಿಗೇಡಿಗಳು ಮದರಸಾ ಜಾಗದ ವಿಚಾರಕ್ಕೆ, ಸಾಮರ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ನುಗ್ಗಿ, ಕಿಟಕಿ ಗಾಜುಗಳನ್ನು ಒಡೆದು ದಾಂಧಲೆ ಮಾಡಿದ್ದಾರೆ. ಈ ವೇಳೆ ಒಳಗಿದ್ದ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿ ಖಾರದ ಪುಡಿ ಬೆರಸಿದ ನೀರು ಎರಚಿ ಅವರನ್ನು ಹಿಮ್ಮೆಟ್ಟಿಸೋ ಕೆಲಸ ಮಾಡಿದ್ದಾರೆ. ಬಳಿಕ ನೋಡು ನೋಡುತ್ತಿದ್ದಂತೆ ಇಡೀ ಶಾಲೆ ರಣರಂಗವಾಗಿ ಮಾರ್ಪಟ್ಟಿದೆ.

ಮಸೀ ಅಹಮದ್ ಎಂಬುವವರು 1988ರಲ್ಲಿ ಮದರಸಾಗೆ ಹತ್ತು ಗುಂಟೆ ಜಮೀನು ದಾನವಾಗಿ ಕೊಟ್ಟಿದ್ದರು. ಆ ಜಾಗದಲ್ಲಿ ಖಲೀದ್ ಮುಶ್ರಫ್ ಎಂಬುವವರು ಮದರಸಾ ಮಾಡಿಕೊಂಡು ಅಕ್ಕಪಕ್ಕದ ಐದು ಎಕರೆ ಜಾಗದಲ್ಲಿ ಶಾಲೆ, ಕಾಲೇಜು ನಿರ್ಮಿಸಿ ಕಳೆದ ನಲವತ್ತು ವರ್ಷದಿಂದ ನಡೆಸಿಕೊಂಡು ಬಂದಿದ್ದಾರೆ.

ಇದೀಗ ಮೂಲ ಮಾಲೀಕ, ಮಸೀ ಅಹಮದ್ ಅವರ ಮಕ್ಕಳು, ಮೊಮ್ಮಕ್ಕಳು ಕೇಸು ದಾಖಲಿಸಿದ್ದು, ಕೇವಲ ಹತ್ತು ಗುಂಟೆ ಜಮೀನು ಮಾತ್ರ ದಾನವಾಗಿ ಕೊಟ್ಟಿದ್ದೇವೆ. ಆದರೆ ಮದರಸಾದವರು ಅಕ್ರಮವಾಗಿ ಪಕ್ಕದ ಐದು ಎಕರೆ ಜಾಗವನ್ನು ಕಬಳಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಚಾರ, ಸದ್ಯ ಹೈಕೋರ್ಟ್ ನಲ್ಲಿದ್ದು, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಲಾಗಿದೆ. ಆದರೂ ಇಬ್ಬರ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿವೆ. ಇನ್ನೂ ಈ ಗಲಾಟೆ ಸಂಬಂಧ, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಾಲೆಯ ಮಾಲೀಕ ಖಲೀದ್ ಮುಶ್ರಫ್ ಅವರು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಯಾಸೀನ್, ಅಮೀನ್, ಅಕ್ಬರ್, ಇನಾಯಿತ್, ಸುಲ್ತಾನ್, ಹೀಮದ್ ಪಾಷ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಾವು ಇಲ್ಲಿ ಕಳೆದ ನಲವತ್ತು ವರ್ಷದಿಂದ ಶಾಲೆ ನಡೆಸತ್ತಿದ್ದೇವೆ. ಆದರೆ ಜುಲೈ 4ರ ತಡರಾತ್ರಿ ಏಕಾಏಕಿ ಶಾಲೆಗೆ ನುಗ್ಗಿ ಕೆಲವರು ಅತಿಕ್ರಮಣ ಪ್ರವೇಶ ಮಾಡಿ ಹಲ್ಲೆ, ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರು. ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!