ಪಿಎಸ್ಐ ಭೈರಪ್ಪ 
ರಾಜ್ಯ

50 ಲಕ್ಷ ವರದಕ್ಷಿಣೆಗಾಗಿ ಕಿರುಕುಳ: ಪತ್ನಿಯನ್ನು ಕೊಲ್ಲಲು ಮಚ್ಚು ಹಿಡಿದು ಅಟ್ಟಾಡಿಸಿದ PSI ಭೈರಪ್ಪ ಕೊನೆಗೂ ಬಂಧನ!

ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸಪ್ಪನನ್ನು ಈಗ ಬಂಧಿಸಲಾಗಿದೆ.

ಬೆಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸಪ್ಪನನ್ನು ಈಗ ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪನನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಕೆಲವು ಸಮಯದಿಂದ ಪಿಎಸ್ಐ ಭೈರಪ್ಪ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹ ತಾರಕಕ್ಕೇರಿದಾಗ, ಪಿಎಸ್ಐ ಭೈರಪ್ಪ ಮನೆಯಲ್ಲಿದ್ದ ಮಚ್ಚನ್ನು ಹಿಡಿದು ಪತ್ನಿ ಮತ್ತು ಮಾವನ ಮೇಲೆ ಹಲ್ಲೆಗೆ ಮುಂದಾಗಿದ್ದನು. ಹಲ್ಲೆಯ ಬೆನ್ನಲ್ಲೇ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಆರಂಭದಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇನ್ನು ಪ್ರಾಥಮಿಕ ತನಿಖೆಯಲ್ಲಿ ಕಿರುಕುಳ, ಹಲ್ಲೆ ನಡೆಸಿದ್ದು ಬಯಲಾಗುತ್ತಿದ್ದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಭೈರಪ್ಪನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಮಂದಿರಕ್ಕೆ ಸಂಬಂಧಿಸಿದ ವಿವಾದಕ್ಕೆ ಸುಪ್ರೀಂ ಎಂಟ್ರಿ; ಮುಸ್ಲಿಮರಿಗೂ ನಮಾಜ್ ಮಾಡಲು ಅವಕಾಶ

ಒಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ; ಮಂಗಳೂರು ನಾವಿಕನ ರಕ್ಷಣೆ, ದಾಳಿಯ ಭೀಕರತೆ ಬಿಚ್ಚಿಟ್ಟ ಬಂಟ್ವಾಳದ ಯುವಕ!

ಅಪಾರ್ಟ್ ಮೆಂಟ್ ನಿರ್ವಹಣೆ -ಮಾಲೀಕತ್ವ ಕುರಿತು ಹೊಸ ಕಾಯ್ದೆ ಜಾರಿಗೆ ಸರ್ಕಾರ ಒಲವು: ಜು.15ಕ್ಕೆ CM ಡಿ ಕೆ ಶಿವಕುಮಾರ್ ಸಮಾಲೋಚನಾ ಸಭೆ-Video

'ಸಿದ್ದರಾಮಯ್ಯ ಕೆಳಗಿಳಿಸಿ CM ಆಗಲು ಹೈಕಮಾಂಡ್‌ಗೆ ಏನು ಮಾತು ಕೊಟ್ಟಿದ್ದೀರೋ ಗೊತ್ತಿಲ್ಲ: ಅದಕ್ಕಾಗಿ ರೈತರ ಬದುಕು ಬಲಿ ಕೊಡಬೇಡಿ'; ಡಿಕೆಶಿ ವಿರುದ್ಧ ದೇವೇಗೌಡ ವಾಗ್ದಾಳಿ

'ಭಕ್ತ ಪ್ರಹ್ಲಾದ' ಹರಿಕಥಾ ಪ್ರಸಂಗದಲ್ಲಿ ಆದಿಗುರು ಶಂಕರಾಚಾರ್ಯರ ನಿಂದನೆ: ಉಡುಪಿಯ ಶ್ರೀಕೃಷ್ಣ ಮಠ ವಿಷಾದ! Video