ಸುದ್ದಿಗೋಷ್ಠಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಬಿಡದಿ ಟೌನ್ ಶಿಪ್ ಯೋಜನೆ ಸಂಬಂಧ ಸಮಿತಿ ರಚನೆ: CM ಡಿ ಕೆ ಶಿವಕುಮಾರ್-Video

ನನಗೆ ಬಿಡದಿ ಟೌನ್ ಶಿಪ್ ಯೋಜನೆ ಜಾರಿಗೆ ತರುವ ತರಾತುರಿಯಲ್ಲ, ಶಾಸಕರು, ಅಧಿಕಾರಿಗಳು ಅಥವಾ ನಿವೃತ್ತ ನ್ಯಾಯಾಧೀಶರು ಸಮಿತಿಯಲ್ಲಿರಬೇಕೊ ಎಂದು ತೀರ್ಮಾನ ಮಾಡುತ್ತೇವೆ. ಅವರು ನೀಡಿದ ವರದಿ ಆಧಾರದ ಮೇಲೆ ಮುಂದುವರಿಯುತ್ತೇವೆ ಎಂದು ತಿಳಿಸಿದರು.

ಬಿಡದಿ ಟೌನ್ ಶಿಪ್ ಯೋಜನೆ ಜಾರಿಗೆ ಸಂಬಂಧ ಇನ್ನೆರಡು ಮೂರು ತಿಂಗಳೊಳಗೆ ಸಮಿತಿ ರಚನೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ನಿರ್ಧಾರ ಮಾಡುತ್ತೇವೆ. ನನಗೆ ಬಿಡದಿ ಟೌನ್ ಶಿಪ್ ಯೋಜನೆ ಜಾರಿಗೆ ತರುವ ತರಾತುರಿಯಲ್ಲ, ಶಾಸಕರು, ಅಧಿಕಾರಿಗಳು ಅಥವಾ ನಿವೃತ್ತ ನ್ಯಾಯಾಧೀಶರು ಸಮಿತಿಯಲ್ಲಿರಬೇಕೊ ಎಂದು ತೀರ್ಮಾನ ಮಾಡುತ್ತೇವೆ. ಅವರು ನೀಡಿದ ವರದಿ ಆಧಾರದ ಮೇಲೆ ಮುಂದುವರಿಯುತ್ತೇವೆ ಎಂದು ತಿಳಿಸಿದರು.

ಬಿಡದಿ ಟೌನ್ ಶಿಪ್ ಯೋಜನೆ ಮಾಡುವ ಯಾವುದೇ ಉದ್ದೇಶ ನನಗಿಲ್ಲ, ಇದು ನನ್ನ ಯೋಜನೆ ಅಲ್ಲ, 2006ರಲ್ಲಿ ಹೆಚ್ ಡಿ ಕುಮಾರಸ್ವಾಮಿ, ಬಿ ಎಸ್ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ ಆರಂಭಿಸಿದ್ದು, ಅದನ್ನು ನಾನು ಇಂದು ಮುಂದುವರಿಸಿಕೊಂಡು ಹೋಗುತ್ತಿದ್ದೇನೆ ಅಷ್ಟೆ, ರೈತರ ಜಮೀನನ್ನು ಖಂಡಿತಾ ಬಲವಂತವಾಗಿ ಕಿತ್ತುಕೊಳ್ಳುವುದಿಲ್ಲ, ಅವರು ಸ್ವಇಚ್ಛೆಯಿಂದ ನೀಡಿದರೆ ಮಾತ್ರ ಮುಂದುವರಿಸುತ್ತೇವೆ, ಸಮಿತಿಯಲ್ಲೇ ತೀರ್ಮಾನ ಮಾಡುತ್ತೇವೆ, ಬಿಡದಿ ಟೌನ್‌ಶಿಪ್ ನನ್ನ ಕನಸಿನ ಯೋಜನೆಯಲ್ಲ; ನಮ್ಮ ಹಿರಿಯರು ರೂಪಿಸಿದ ಮಾರ್ಗಸೂಚಿಗೆ ನಾನು ಮುನ್ನುಡಿ ಬರೆಯುತ್ತಿದ್ದೇನೆ ಎಂದು ಹೇಳಿದರು.

ರೈತರನ್ನು ತಪ್ಪುದಾರಿಗೆಳೆಯುವ ಸಂಚನ್ನು ಇಂದು ದೇವೇಗೌಡ ಕುಟುಂಬ ಮಾಡುತ್ತಿದೆ. ನಾನು ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ಅವರಿಂದ ಆಗುತ್ತಿಲ್ಲ, ಹೇಗಾದರೂ ಮಾಡಿ ನನ್ನನ್ನು ಜೈಲಿಗೆ ಕಳುಹಿಸುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ರೈತರು ಜಮೀನು ನೀಡುವಾಗ ಕಾನೂನಾತ್ಮಕವಾಗಿ ವಿಷಯವನ್ನು ನಿರ್ವಹಿಸಲು ಸಮಿತಿ ರಚಿಸುತ್ತಿದ್ದೇವೆ, ಇಲ್ಲಿ ಸರ್ಕಾರ ಮತ್ತು ರೈತರ ನಡುವಿನ ವ್ಯವಹಾರ, ರೈತರ ಜಮೀನಿಗೆ ನಿಖರ ನ್ಯಾಯಬದ್ಧ ಪರಿಹಾರ ನೀಡಲಾಗುವುದು, ಈ ಯೋಜನೆ ಕೈಬಿಟ್ಟಿಲ್ಲ, ಹಾಗೆಂದು ಒತ್ತಾಯಪೂರ್ವಕವಾಗಿ ರೈತರಿಂದ ಜಮೀನು ಕಿತ್ತುಕೊಳ್ಳುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video

'ಅಪಾರ್ಟ್ ಮೆಂಟ್ ಹಸ್ತಾಂತರ ವೇಳೆ ಅದರ ಸಂಪೂರ್ಣ ಹಕ್ಕು ಮಾಲೀಕರಿಗೆ ಸಿಗಬೇಕು; ಮಾಲೀಕತ್ವ ರಕ್ಷಣೆಗೆ ಮಸೂದೆ ಜಾರಿ': CM ಡಿ.ಕೆ ಶಿವಕುಮಾರ್; Video

SIR ಡ್ಯೂಟಿ ನಿರ್ವಹಿಸುತ್ತಿರುವ BLO ಗಳಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದಿಂದ 6 ಸಾವಿರ ರೂ. ಗೌರವಧನ ಘೋಷಣೆ!

'ನ್ಯಾಯ ಎಲ್ಲಿದೆ?': RCB ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್; ಆರ್ ಅಶೋಕ ಟೀಕೆ

NDAಯತ್ತ ಶರದ್ ಪವಾರ್ ಚಿತ್ತ? "ಆಪರೇಷನ್ ಘಡಿ"ಗೆ ಫಡ್ನವೀಸ್ ಮಾಸ್ಟರ್ ಪ್ಲಾನ್!