ಕೊಪ್ಪಳ ಜಿಲ್ಲೆಯ ಗಂಗಾವತಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಒಂಬತ್ತು ರೆಸಾರ್ಟ್ಗಳನ್ನು ಮುಚ್ಚುವಂತೆ ಸ್ಥಳೀಯ ಆಡಳಿತ ಆದೇಶಿಸಿದೆ.
ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.
ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸುವಂತೆ ಸಹಾಯಕ ಪರಿಸರಾಧಿಕಾರಿಗೆ ಅವರು ನಿರ್ದೇಶನ ನೀಡಿದ್ದರು.