ವಿಧಾನಸೌಧ online desk
ರಾಜ್ಯ

ಶಕ್ತಿ ಕೇಂದ್ರ ವಿಧಾನಸೌಧಕ್ಕೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶ

ಇದೀಗ ಬರಗಾಲದ ಬಿಸಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಯಾವ ದಿಕ್ಕಿಗೆ ಹೋದರೂ ನೀರಿಲ್ಲ. ಕಳೆದ ವಾರ ಅಲ್ಪ ಸ್ವಲ್ಪ ಮಳೆಯಾದರೂ ಯಾವುದೇ ಜಲಾಶಯಗಳು ತುಂಬುವಷ್ಟು ಒಳ ಹರಿವು ಬಂದಿಲ್ಲ.

ಇದೀಗ ಬರಗಾಲದ ಬಿಸಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ಪ್ರಸ್ತುತ ಹವಾಮಾನ ವೈಪರೀತ್ಯದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ನೀರಿನಂತಹ ಅತ್ಯಮೂಲ್ಯ ಸಂಪನ್ಮೂಲಗಳನ್ನು ಅಪವ್ಯಯ ಮಾಡದೆ ಮಿತವಾಗಿ ಬಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಆದೇಶವನ್ನು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.

ಸಚಿವಾಲಯದಲ್ಲಿ ವಿದ್ಯುತ್‌ನ್ನು ಮಿತವಾಗಿ ಬಳಸುವ ಕುರಿತು ಆಗಾಗ್ಗೆ ಅನೇಕ ಸುತ್ತೋಲೆಗಳ ಮೂಲಕ ಹಲವಾರು ಬಾರಿ ಸೂಚನೆಗಳನ್ನು ನೀಡಲಾಗಿದೆ. ಆದರೂ, ಸಹ ಸಚಿವಾಲಯದ ಕಚೇರಿಗಳಲ್ಲಿ ವಿದ್ಯುತ್ತಿನ ಬಳಕೆಯಲ್ಲಿ ನಿಯಂತ್ರಣವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿದ್ಯುತ್ ನವೀಕರಿಸಲಾಗದಂತಹ ಅತ್ಯಂತ ಮಹತ್ವದ ನೈಸರ್ಗಿಕ ಸಂಪನ್ಮೂಲವಾಗಿರುವುದರಿಂದ ವಿದ್ಯುತ್‌ನ್ನು ಸ್ವೇಚ್ಛಾ ಮನೋಭಾವದಿಂದ ಬಳಸುವುದು ಸರಿಯಾದ ಕ್ರಮವಾಗಿರುವುದಿಲ್ಲ. ಇಂತಹ ಅಮೂಲ್ಯವಾದ ವಿದ್ಯುತ್‌ನ್ನು ವ್ಯಯ ಮಾಡದೇ ಮಿತವಾಗಿ ಬಳಸುವುದು ಮತ್ತು ಅನಗತ್ಯ ಬಳಕೆಯನ್ನು ತಡೆಗಟ್ಟುವುದರ ಮೂಲಕ ವಿದ್ಯುತ್ ಉಳಿತಾಯ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಈ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

Puri Rath Yatra: ಭಾರಿ ಜನಸಾಗರ; ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ: Video ವೈರಲ್, ಮುಸ್ಲಿಂ ಮೌಲ್ವಿಯ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿದ ಅಯೋಧ್ಯೆ ಸ್ವಾಮೀಜಿ!

ಮಂಗಳೂರು: ಹಾಡಹಗಲೇ ಭಯಾನಕ ಘಟನೆ; ಜನರ ಎದುರೇ ಮಚ್ಚಿನಿಂದ ಕೊಚ್ಚಿ ಯುವತಿಯ ಕಗ್ಗೊಲೆ!

India Vs England: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ; ಸಾರ್ವಕಾಲಿಕ ಟಾಪ್-ಫೈವ್ ಪಟ್ಟಿಗೆ ಸೇರ್ಪಡೆ!