ಶಿವಾನಂದ ಪಾಟೀಲ್ 
ರಾಜ್ಯ

ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ: ಮುಖ್ಯಮಂತ್ರಿಗಳಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿ

ಜಲಾಶಯವು ಸುಮಾರು 70 ಟಿಎಂಸಿ ಅಡಿಗಳಷ್ಟು ಬಳಸಬಹುದಾದ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಪೂರ್ಣ ಸಾಮರ್ಥ್ಯವನ್ನು ತಲುಪಲು ಸುಮಾರು 35 ಟಿಎಂಸಿ ಅಡಿ ಹೆಚ್ಚುವರಿ ಒಳಹರಿವಿನ ಅಗತ್ಯವಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದರೆ ಭವಿಷ್ಯದ ದಿನಗಳಲ್ಲಿ ನೀರಿನ ಕೊರತೆಯಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಜಲಾಶಯವು ಸುಮಾರು 70 ಟಿಎಂಸಿ ಅಡಿಗಳಷ್ಟು ಬಳಸಬಹುದಾದ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಪೂರ್ಣ ಸಾಮರ್ಥ್ಯವನ್ನು ತಲುಪಲು ಸುಮಾರು 35 ಟಿಎಂಸಿ ಅಡಿ ಹೆಚ್ಚುವರಿ ಒಳಹರಿವಿನ ಅಗತ್ಯವಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಮುಂಗಾರು ಮಳೆ ಇನ್ನೂ ಆರಂಭವಾಗಿರುವುದರಿಂದ, ಮುಂದಿನ ವಾರಗಳಲ್ಲಿ ಉಳಿದ ನೀರಿನ ಸಂಗ್ರಹವನ್ನು ಸಾಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸಿದ ಶಾಸಕರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವಾರು ಗ್ರಾಮಗಳು ಈಗಾಗಲೇ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಎಂದು ಹೇಳಿದರು. ನೀರಾವರಿ ಸಲಹಾ ಸಮಿತಿ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುವವರೆಗೆ ಸರ್ಕಾರ ಕಾಯಬಾರದು, ಬದಲಾಗಿ ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಪರಿಗಣಿಸಿ ತಕ್ಷಣವೇ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಿ ಹೇಳಿದರು.

ಪ್ರತಿ ವರ್ಷ ಜಲಾಶಯ ಭರ್ತಿಯಾದ ನಂತರ ನೂರರಿಂದ ಇನ್ನೂರು ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಧಿಕಾರಿಗಳು ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಇನ್ನೂ ಹರಿದು ಬಂದಿಲ್ಲ ಎಂದು ಕಾಲುವೆಗಳಿಗೆ ನೀರು ಹರಿಸಲು ಹಿಂದೇಟು ಹಾಕುತ್ತಿದ್ದಾರೆ.

ಇನ್ನೂ ಹತ್ತರಿಂದ ಹದಿನೈದು ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾದ ನಂತರ ಕಾಲುವೆಗಳಿಗೆ ನೀರು ಬಿಡಬಹುದು ಎಂಬುದು ಅಧಿಕಾರಿಗಳ ನಿಲುವಾಗಿದೆ. ಆದರೆ ಈ ವಿಳಂಬ ನೀತಿಯಿಂದ ಸರ್ಕಾರ ಜನರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ತಾವು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಹಲವು ಜನಪರ ವಿಚಾರಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಂಡು ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದೀರಿ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ವಿಚಾರದಲ್ಲೂ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಉದ್ವಿಗ್ನತೆ ಮತ್ತಷ್ಟು ತೀವ್ರ: Iran ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರ, ಬಹ್ರೇನ್-ಕುವೈತ್ ಗುರಿಯಾಗಿಸಿ ಕ್ಷಿಪಣಿಗಳ ಸುರಿ ಮಳೆ..!

'ನಾವು ತಪ್ಪು ಮಾಡಿದೆವು...': Epstein ಬಿಡುಗಡೆ ಎಡವಟ್ಟು ಒಪ್ಪಿಕೊಂಡ ಅಮೆರಿಕ ಉಪಾಧ್ಯಕ್ಷ JD Vance, Trump ಆಡಳಿತಕ್ಕೆ ತೀವ್ರ ಮುಜುಗರ..!

'ಅವರಿಗೆ ಕಥೆ ಗೊತ್ತಿದೆ, ಎಚ್ಚರಿಕೆಯಿಂದ ವರ್ತಿಸಲಿ': Iranಗೆ Trump ಕಠಿಣ ಎಚ್ಚರಿಕೆ, ಗಡುವು ನೀಡದೆ ಸೇನಾ ಕಾರ್ಯಾಚರಣೆಗೆ ಅಮೆರಿಕಾ ಮುಂದು..!

Bidadi township ಯೋಜನೆ: ಸಮಿತಿ ರಚನೆಯಲ್ಲ, ಯೋಜನೆಯನ್ನೇ ಕೈಬಿಡಿ; ರಾಜ್ಯ ಸರ್ಕಾರ ವಿರುದ್ಧ BJP ಆಗ್ರಹ

'ಬಲವಂತವಾಗಿ ಜಮೀನು ಪಡೆಯುವುದಿಲ್ಲ ಎಂಬ ಮಾತು ಸಾಲದು, ಯೋಜನೆಯನ್ನೇ ರದ್ದುಪಡಿಸಿ'; ಸಿಎಂ ಡಿಕೆ.ಶಿವಕುಮಾರ್'ಗೆ ಬಿಡದಿ ರೈತರ ಒತ್ತಾಯ