ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ  
ರಾಜ್ಯ

ಮಂಗಳೂರು: ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ; ಇಬ್ಬರು ಬಾಂಗ್ಲಾ ವಲಸಿಗರು ಪರಾರಿ!

ನಗರದಲ್ಲಿ ವಶಕ್ಕೆ ಪಡೆದ 19 ಅಕ್ರಮ ಬಾಂಗ್ಲಾದೇಶಿ ವಲಸಿಗರ ತನಿಖೆಯ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇವರ ಆಗಮನ ಮತ್ತು ಉದ್ಯೋಗಕ್ಕೆ ಸಹಕರಿಸಿದ್ದ ಕೋಲ್ಕತ್ತಾದ ಮಧ್ಯವರ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ನಗರದಲ್ಲಿ ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಬೆನ್ನಲ್ಲೇ, ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗುರುವಾರ ತಿಳಿಸಿದ್ದಾರೆ.

ನಗರದಲ್ಲಿ ವಶಕ್ಕೆ ಪಡೆದ 19 ಅಕ್ರಮ ಬಾಂಗ್ಲಾದೇಶಿ ವಲಸಿಗರ ತನಿಖೆಯ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇವರ ಆಗಮನ ಮತ್ತು ಉದ್ಯೋಗಕ್ಕೆ ಸಹಕರಿಸಿದ್ದ ಕೋಲ್ಕತ್ತಾದ ಮಧ್ಯವರ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿಚಾರಣೆ ವೇಳೆಯಲ್ಲಿ ಇನ್ನೂ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ಒಪ್ಪಿಕೊಂಡಿರುವುದಾಗಿ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡಗಳು ಆತ ಸೂಚಿಸಿದ ಎರಡು ಸ್ಥಳಗಳನ್ನು ಪರಿಶೀಲಿಸಿದವು, ಆದರೆ ಅಷ್ಟರಲ್ಲಾಗಲೇ ಆ ಇಬ್ಬರೂ ಕಾರ್ಮಿಕರು ನಗರವನ್ನು ತೊರೆದಿದ್ದರು ಎಂಬುದು ತಿಳಿದುಬಂದಿದೆ. ಮಂಗಳೂರಿನಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ನಗರ ಪೊಲೀಸರು ಕಳೆದ 10 ದಿನಗಳಿಂದ ತೀವ್ರ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಮತ್ತು ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಆಯುಕ್ತರು ತಿಳಿಸಿದರು.

ವಶಕ್ಕೆ ಪಡೆದ ವಲಸಿಗರು ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದರು ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಕೆಲವರು ಸಂಪೂರ್ಣ ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದರೆ, ಇನ್ನು ಕೆಲವರು ಅಸಲಿ ಕಾರ್ಡ್‌ಗಳಲ್ಲಿನ ಮೂಲ ಭಾವಚಿತ್ರಗಳನ್ನು ಬದಲಾಯಿಸಿ ತಮ್ಮದೇ ಆದ ಭಾವಚಿತ್ರಗಳನ್ನು ಅಂಟಿಸುವ ಮೂಲಕ ಅವುಗಳನ್ನು ನಕಲಿ ಮಾಡಿದ್ದರು ಎಂದು ಅವರು ಹೇಳಿದರು.

ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮೊದಲು ಅವರ ಗುರುತು ಮತ್ತು ಹಿನ್ನೆಲೆಯನ್ನು ಪರಿಶೀಲಿಸುವಂತೆ 'ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ' (CREDAI) ಮತ್ತು ಇತರ ಬಿಲ್ಡರ್‌ಗಳಿಗೆ ಪೊಲೀಸರು ಸೂಚಿಸಿದ್ದಾರೆ ಎಂದು ರೆಡ್ಡಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Puri Rath Yatra: ಭಾರಿ ಜನಸಾಗರ; ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ಕಿಸ್ಮತ್ ಕಿ ಕಹಾನಿ: ಅಂದು Lionel Messi ಬಾತ್ ಟಬ್ ನಲ್ಲಿ ಮುದ್ದಾಡಿದ್ದ ಮಗುವೇ ಇಂದು FIFA WorldCup ಫೈನಲ್ ನಲ್ಲಿ ಎದುರಾಳಿ!

ಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್‌ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ

ಸಂಪುಟ ವಿಸ್ತರಣೆ ಸರ್ಕಸ್: ಅಂತಿಮವಾಗದ ಸಚಿವರ ಪಟ್ಟಿ; ಮಾತುಕತೆ ಮುಂದೂಡಿಕೆ ಎಂದ ಹರಿಪ್ರಸಾದ್

Many Have Gone, Many Have Come : "ಇದೆಲ್ಲಾ ಮಾಮೂಲಿ" ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಪ್ರತಿಕ್ರಿಯೆ..!