ರವಿ 
ರಾಜ್ಯ

ಬೆಂಗಳೂರು: ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕೊಲೆಯಾದ ವ್ಯಕ್ತಿಯನ್ನು ರವಿ(35) ಎಂದು ಗುರುತಿಸಲಾಗಿದೆ. ರವಿ ಗಾರೆ ಮೇಸ್ತ್ರಿ ಸಹೋದರನಾಗಿದ್ದು, ಮನೆ ಮಾಲೀಕ ದೇವರಾಜ್ ಹಾಗೂ ಆತನ ಮಗ ಸೇರಿದಂತೆ ನಾಲ್ವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳಪೆ ಗುಣಮಟ್ಟದ ನೀರಿನ ಸಂಪ್‌ ನಿರ್ಮಾಣ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮನೆ ಮಾಲೀಕ, ಗಾರೆ ಮೇಸ್ತ್ರಿ ತಮ್ಮನನ್ನು ಹತ್ಯೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕು ಕಿತ್ತನಹಳ್ಳಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ರವಿ(35) ಎಂದು ಗುರುತಿಸಲಾಗಿದೆ. ರವಿ ಗಾರೆ ಮೇಸ್ತ್ರಿ ಸಹೋದರನಾಗಿದ್ದು, ಮನೆ ಮಾಲೀಕ ದೇವರಾಜ್ ಹಾಗೂ ಆತನ ಮಗ ಸೇರಿದಂತೆ ನಾಲ್ವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ.

ಮನೆಯ ನೀರಿನ ಸಂಪಿನ ಚೇಂಬರ್ ಕವರ್ ಸರಿಯಾಗಿ ಕಟ್ಟಿಲ್ಲ ಎಂದು ನಿನ್ನೆ ರಾತ್ರಿ‌ 8:30 ಸುಮಾರಿಗೆ ಜಗಳ ಆರಂಭವಾಗಿದೆ. ಈ ವೇಳೆ ರವಿ ಮೇಲೆ ದೇವರಾಜು ಮತ್ತು ಅವರ ಗ್ಯಾಂಗ್ ಏಕಾಏಕಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ವಿಕ್ಟೋರಿಯಾ ಶವಾಗಾರಕ್ಕೆ ರವಾನಿಸಿದ್ದಾರೆ. ಆರೋಪಿಗಳಾದ ದೇವರಾಜ್ ಮತ್ತು ಆತನ ಮಗ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!

‘ನಿರ್ಲಕ್ಷ್ಯ ಮಾಡಿದ್ರೆ ಕ್ರಮ ಖಚಿತ’: ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ತಪಾಸಣೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ!

Hanuman Ansh: ಥಿಯೇಟರ್ ಗಳಲ್ಲಿ ಭಕ್ತಿಯ ಅಲೆ, ಚಪ್ಪಲ್ಲಿ ಬಿಚ್ಚಿಟ್ಟು, ಹನುಮಾನ್ ಚಾಲೀಸಾ ಪಠಿಸಿದ ಪ್ರೇಕ್ಷಕರು! Video ವೈರಲ್