ದೇವೇಗೌಡ ಹಾಗೂ ಚೆನ್ನಮ್ಮ 
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮೇಲೆ ನಡೆದಿತ್ತು ಆ್ಯಸಿಡ್ ದಾಳಿ; ಎರಡು ಬಾರಿ ಸಾವು ಗೆದ್ದು ಬಂದಿದ್ದ ಚೆನ್ನಮ್ಮ!

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಾಲಾಗಿದ್ದ ಚೆನ್ನಮ್ಮ ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ(85) ಅವರು ಶನಿವಾರ ಸಂಜೆ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಾಲಾಗಿದ್ದ ಚೆನ್ನಮ್ಮ ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. 2001ರಲ್ಲಿ ದೇವೇಗೌಡರ ತಮ್ಮನ ಮಗನಿಂದಲೇ ಆ್ಯಸಿಡ್‌ ದಾಳಿಗೆ ಒಳಗಾಗಿದ್ದ ಚೆನ್ನಮ್ಮ ಅವರು ಎರಡು ಬಾರಿ ಸಾವು ಗೆದ್ದು ಬಂದಿದ್ದರು.

ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಆ್ಯಸಿಡ್ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಹೋದರ ಬಸವೇಗೌಡರ ಪುತ್ರ ಲೋಕೇಶ್ ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಈ ಘಟನೆ ನಡೆದಿತ್ತು.

ದೈವಭಕ್ತರಾದ ದೇವೇಗೌಡರ ಕುಟುಂಬಕ್ಕೆ ಹರದನಹಳ್ಳಿಯ ದೇವೇಶ್ವರಸ್ವಾಮಿ ಮನೆದೇವರು. ದೇವೇಗೌಡರ ಕುಟುಂಬ ಪ್ರತಿ ವರ್ಷ ಶಿವರಾತ್ರಿಯಂದು ಇಲ್ಲಿ ಪೂಜೆ ಸಲ್ಲಿಸುತ್ತದೆ. ಅದರಂತೆ 2001ರ ಫೆಬ್ರವರಿ 21ರಂದು ಮನೆ ದೇವರಿಗೆ ಪೂಜೆ ಸಲ್ಲಿಸಲು ಹೋದಾಗ ಈ ಆಘಾತಕಾರಿ ಘಟನೆ ಇಡೀ ಕುಟುಂಬವನ್ನು ನಡುಗಿಸಿತ್ತು.

ದೇವೇಗೌಡರು ತಮ್ಮ ಬಿಡುವಿಲ್ಲದ ಕಾರ್ಯದಲ್ಲಿ ನಿರತರಾಗಿದ್ದರಿಂದ ಚೆನ್ನಮ್ಮ ಅವರು ಪುತ್ರ ರೇವಣ್ಣ ಹಾಗೂ ಸೊಸೆ ಭವಾನಿ ರೇವಣ್ಣ ಅವರೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಪೂಜೆಯಲ್ಲಿದ್ದಾಗ ದೇವೇಗೌಡರ ಸಹೋದರ ಬಸವೇಗೌಡರ ಪುತ್ರ ಲೋಕೇಶ್ ಎಂಬಾತ ಪೂಜೆಯ ನೆಪದಲ್ಲಿ ಬಂದು ಚೆನ್ನಮ್ಮ ಅವರ ಮೇಲೆ ಆಸಿಡ್ ದಾಳಿ ನಡೆಸಿದ್ದ. ಈ ಘಟನೆಯಲ್ಲಿ ಚೆನ್ನಮ್ಮ ಅವರ ಮುಖ, ತಲೆಗೆ ಗಂಭೀರ ಗಾಯಗಳಾಗಿದ್ದರೆ, ಭವಾನಿ ರೇವಣ್ಣ ಅವರ ಕೈಗೂ ಗಾಯವಾಗಿತ್ತು. ಪ್ರಾಣಾಪಾಯದಿಂದ ಪಾರಾದ ಈ ಘಟನೆ ರಾಜಕೀಯ ಪಿತೂರಿ ಹಾಗೂ ಕೌಟುಂಬಿಕ ಕಲಹದ ಚರ್ಚೆಗೆ ಗ್ರಾಸವಾಗಿತ್ತು.

ಕೊರೋನಾ ಗೆದ್ದು ಬಂದ ಚೆನ್ನಮ್ಮ

ಇಡೀ ಜಗತ್ತನ್ನೇ ಕಾಡಿದ ಮಹಾಮಾರಿ ಕೊರೋನಾ ಸೋಂಕಿಗೂ ಚೆನ್ನಮ್ಮ ಅವರು ತುತ್ತಾಗಿದ್ದರು. ಅಲ್ಲದೇ, 2024-2025 ರಲ್ಲಿ ಎದೆ ಸಂಬಂಧಿತ ಸಮಸ್ಯೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಹೀಗೆ, ಅಪಾಯದ ಸನ್ನಿವೇಶಗಳಿಂದ ಪಾರಾಗಿ ಬಂದಿದ್ದ ಚೆನ್ನಮ್ಮ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿಯ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ