ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ 
ರಾಜ್ಯ

ತಾರಕಕ್ಕೇರಿದ ಬಿಡದಿ ಟೌನ್‌ಶಿಪ್‌ ಜಟಾಪಟಿ: ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ಸರ್ಕಾರ!

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರಿಗೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಬಿಡದಿ ಟೌನ್​​ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಲ್ಲದೆ ರೈತರ ಹೋರಾಟ ಸಹ ತೀವ್ರಗೊಂಡಿದೆ.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರಿಗೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ.

ಇತ್ತೀಚಿಗೆ ಬಿಡದಿ ಟೌನ್‌ಶಿಪ್ ವ್ಯಾಪ್ತಿಯ 4 ಕಂದಾಯ ಗ್ರಾಮಗಳಾದ ಬನ್ನಿಗಿರಿ, ಅರಳಾಳುಸಂದ್ರ, ಕೆ.ಜಿ.ಗೊಲ್ಲರಪಾಳ್ಯ, ಹೊಸೂರು ಗ್ರಾಮಗಳ ಜಮೀನು ಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಎರಡನೇ ಹಂತದ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ ಭೂಮಿಯೂ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ವ್ಯಾಪ್ತಿಗೆ ಒಳಪಟ್ಟಿದೆ.

ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಎಚ್‌ಡಿಕೆ ಕುಟುಂಬದ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದು, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ಸರ್ವೇ ನಂಬರ್‌ಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಜಮೀನು ಈ ಯೋಜನೆಗೆ ಒಳಪಟ್ಟಿದೆ. ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿರುವ 31 ಎಕರೆ ಜಮೀನು, ನಿಖಿಲ್ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 4 ಎಕರೆ ಜಮೀನಿಗೂ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಹೊಸೂರಿನ 2,390 ಎಕರೆ 12 ಗುಂಟೆ, ಕೆಜಿ ಗೊಲ್ಲರಪಾಳ್ಯದ ಒಟ್ಟು 315 ಎಕರೆ 36 ಗುಂಟೆ, ಬನ್ನಿಗಿರಿ ಗ್ರಾಮದ 775 ಎಕರೆ 8 ಗುಂಟೆ, ಅರಳಾಳುಸಂದ್ರದ 1,460 ಎಕರೆ 21 ಗುಂಟೆ ಜಮೀನು ಭೂಸ್ವಾಧೀನಕ್ಕೊಳಪಟ್ಟಿದೆ ಎಂದು ನಗರಾಭಿವೃದ್ಧಿ ಇಲಾಖೆ(ಬಿಡಿಎ ಮತ್ತು ಬೆಂಗಳೂರು-1)ಯ ಅಧೀನ ಕಾರ್ಯದರ್ಶಿ ರಾಜೇಶ್ ಎಸ್.ಸೂಳಿಕೇರಿ ಅವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bidadi Township: ದೋಸ್ತಿಗಳ ಮಧ್ಯೆಯೇ ಕ್ರೆಡಿಟ್‌ ವಾರ್; ಬಿಜೆಪಿ ಬಿಟ್ಟು ಜೆಡಿಎಸ್'ನಿಂದ ಪ್ರತ್ಯೇಕ ಪಾದಯಾತ್ರೆ, ದೇವೇಗೌಡರೂ ಭಾಗಿ!

‘ಟ್ರಂಪ್‌ ಕೊಲ್ಲುತ್ತೇವೆ’ ಪೋಸ್ಟರ್ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಹತ್ಯೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಣೆ!

ನಿಮ್ಮ ಜಾತಕ ನಿಮಗೊತ್ತಿಲ್ವಾ?: Toxic ಆವರೇಜ್‌ ಎಂದ ಆರ್ಯವರ್ಧನ್‌ ಗುರೂಜಿಗೆ ಹಿಗ್ಗಾಮುಗ್ಗಾ ಜಾಡಿಸಿದ Yash ಅಭಿಮನಿಗಳು!

ಇತಿಹಾಸ ನಿರ್ಮಿಸಿದ ಭಾರತ: ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ 'ವಿಕ್ರಮ್-1' ಯಶಸ್ವಿ ಉಡಾವಣೆ, ವಿಜ್ಞಾನಿಗಳ ಸಂಭ್ರಮ

ಲಿಫ್ಟ್‌ನಲ್ಲಿ ಸಾಕು ನಾಯಿ ಹುಚ್ಚಾಟ: ಬೆಚ್ಚಿಬಿದ್ದ ಬಾಲಕಿಯರು! Video Viral