ಹಿಂದೂ ಯುವಕನ ಮೇಲೆ ಮುಸ್ಲಿಂ ಯುವತಿಯಿಂದ ಹಲ್ಲೆ 
ರಾಜ್ಯ

ನೆಲಮಂಗಲ ನೈತಿಕ ಪೊಲೀಸ್‌ಗಿರಿ: Hindu ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ, Video!

ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ.

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿ ನಡೆದಿದೆ. ಡಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಯುವಕನನ್ನು ಯಶವಂತ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವತಿ ಕೌಸರ್ ಬಾನು ಜೊತೆ ಯಶವಂತ್ ಓಡಾಡುತ್ತಿದ್ದುದ್ದನ್ನು ಗಮನಿಸಿದ ಲಕ್ಕೂರು ಗ್ರಾಮದ ನಿವಾಸಿಗಳಾದ ಸೋಹೇಲ್ ಪಾಷಾ, ಸಯ್ಯದ್ ಕರೀಂ ಮತ್ತು ತಹರೀಕ್ ಪಾಷಾ ಎಂಬುವವರು ಯಶವಂತ್​ನನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು.

ಹಲ್ಲೆ ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿಬಿಟ್ಟಿದ್ದರು. ಇದರಿಂದ ತೀವ್ರ ಮನನೊಂದ ಕೌಸರ್ ಬಾನು ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ನೊಂದ ಯುವತಿಯೇ ಹಲ್ಲೆ ಮಾಡಿದವರ ವಿರುದ್ಧ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ತಾರಕಕ್ಕೇರಿದ ಬಿಡದಿ ಟೌನ್‌ಶಿಪ್‌ ಜಟಾಪಟಿ: ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ಸರ್ಕಾರ!

Bidadi Township: ದೋಸ್ತಿಗಳ ಮಧ್ಯೆಯೇ ಕ್ರೆಡಿಟ್‌ ವಾರ್; ಬಿಜೆಪಿ ಬಿಟ್ಟು ಜೆಡಿಎಸ್'ನಿಂದ ಪ್ರತ್ಯೇಕ ಪಾದಯಾತ್ರೆ, ದೇವೇಗೌಡರೂ ಭಾಗಿ!

‘ಟ್ರಂಪ್‌ ಕೊಲ್ಲುತ್ತೇವೆ’ ಪೋಸ್ಟರ್ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಹತ್ಯೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಣೆ!

ನಿಮ್ಮ ಜಾತಕ ನಿಮಗೊತ್ತಿಲ್ವಾ?: Toxic ಆವರೇಜ್‌ ಎಂದ ಆರ್ಯವರ್ಧನ್‌ ಗುರೂಜಿಗೆ ಹಿಗ್ಗಾಮುಗ್ಗಾ ಜಾಡಿಸಿದ Yash ಅಭಿಮನಿಗಳು!