ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಹಿನ್ನೆಲೆ ಅಜ್ಜಿಯ ಅಂತಿಮ ದರ್ಶನ ಮಾಡಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆರೋಲ್ ಗೆ ಅರ್ಜಿ ಸಲ್ಲಿಕೆ ಮಾಡಿಲ್ಲ.
ಹಾಸನ ಜಿಲೆಯ ಹೊಳೆನರಸಿಪುರದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಪ್ರಜ್ವಲ್ ರೇವಣ್ಣ ಪೆರೋಲ್ ಸಲ್ಲಿಸಿಲ್ಲವಾದರೂ, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಜೈಲಿಂದ ಹೊರ ಬಂದು ನೇರವಾಗಿ ಭಾಗಿಯಾಗುವುದಿಲ್ಲ. ಬದಲಾಗಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲು ಮಾತ್ರ ಅವಕಾಶ ಕೇಳಿದ್ದಾರಂತೆ.
ವಿಡಿಯೋ ಕಾನ್ಸರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಕೈದಿ ಪ್ರಜ್ವಲ್ ರೇವಣ್ಣ ಅನುಮತಿ ಕೋರಿದ್ದು, ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಜೈಲಾಧಿಕಾರಿಗಳು ವಿಸಿ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅನುಮತಿ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೊಳಗಾಗಿದ್ದು, ಕಳೆದ 2 ವರ್ಷದಿಂದ ಜೈಲಿನಲ್ಲಿದ್ದಾರೆ.