ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಯುವತಿ ಅಪಹರಿಸಿ, ಲಾಡ್ಜ್‌ಗೆ ಕರೆದೊಯ್ದು ಗ್ಯಾಂಗ್ ರೇಪ್; ಮೂವರ ಬಂಧನ; ಆದ್ರೆ ಆರೋಪಿಗಳು ಹೇಳುವುದೇ ಬೇರೆ!

ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಆರೋಪಿಗಳು ತನ್ನನ್ನು ಬಲವಂತವಾಗಿ ಕಾರಿನಲ್ಲಿ ಸಂತೆಮರಹಳ್ಳಿ ಪಟ್ಟಣದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಯುವತಿಯನ್ನು ಮೂವರು ಖದೀಮರು ಅಪಹರಿಸಿದ್ದು, ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಆರೋಪಿಗಳು ತನ್ನನ್ನು ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ, ಸಂತೆಮರಹಳ್ಳಿ ಪಟ್ಟಣದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಘಟನೆ ನಡೆದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸರು, ಸ್ಥಳೀಯ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಸೂಕ್ಷ್ಮತೆ ಮತ್ತು ಮಹಿಳೆಯ ಸುರಕ್ಷತೆಗೆ ಸಂಬಂಧಿಸಿದ ಕಳವಳಗಳನ್ನು ಪರಿಗಣಿಸಿ, ಆರೋಪಿಗಳನ್ನು ಬಂಧಿಸಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಅದೇ ಸಮಯದಲ್ಲಿ, ಸಂತ್ರಸ್ತೆ, ಆರೋಪಿಗಳೊಂದಿಗೆ ಸ್ವಯಂಪ್ರೇರಣೆಯಿಂದ ಬಂದಿದ್ದಾರೆಯೇ ಎಂಬುದು ಸೇರಿದಂತೆ ಪ್ರಕರಣದ ಎಲ್ಲಾ ಅಂಶಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು, ಮಹಿಳೆ ತಮ್ಮೊಂದಿಗೆ ಸ್ವಯಂಪ್ರೇರಣೆಯಿಂದ ಬಂದಿದ್ದಾರೆ. ನಾವು ಅಪಹರಿಸಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಲಾಡ್ಜ್‌ನಲ್ಲಿ ವಾಗ್ವಾದ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ವಾಗ್ವಾದದ ನಂತರ, ಮಹಿಳೆಯನ್ನು ಅವರ ಸ್ಥಳಕ್ಕೆ ಬಿಟ್ಟು ಬಂದಿರುವುದಾಗಿ ಅವರು ಆರೋಪಿಗಳು ಹೇಳಿಕೊಂಡಿದ್ದಾರೆ. ನಂತರ ಯುವತಿ ತಮ್ಮ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆಗಳನ್ನು ತಿಳಿಯಲು ಸಂತ್ರಸ್ತೆಯ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಮತ್ತು ಆರೋಪಿಗಳ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Newdelhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ, ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ ನಿಲ್ಲಿಸಲು ರಾಹುಲ್ ನಕಾರ; ಕಾಂಗ್ರೆಸ್ ನ ಆರು ಬೇಡಿಕೆಗಳೇನು?

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95, ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!