ರಾಯಚೂರು: ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ಭೀಕರ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗಾಯಗೊಂಡಿರುವ ಬಾಲಕನನ್ನು ವೇಣುಗೋಪಾಲ ಎಂದು ಗುರುತಿಸಲಾಗಿದ್ದು, ಬಾಲಕನ ತಲೆಯ ಮೇಲಿನ ಚರ್ಮ ಕಿತ್ತು ಬರುವಂತೆ ನಾಯಿಗಳು ಪರಚಿವೆ ಎನ್ನಲಾಗಿದೆ.
ಗಾಯಾಳು ಬಾಲಕನಿಗೆ ಸ್ಥಳೀಯ ನವೋದಯ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.