ಕುಡಿಯುವ ನೀರು online desk
ರಾಜ್ಯ

ಬೆಂಗಳೂರಿಗರೇ ಗಮನಿಸಿ! ನಾಳೆ 12 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ ಚೆಕ್ ಮಾಡಿ..!

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಂಪಿಂಗ್ ಸ್ಟೇಷನ್‌ಗಳ ಕಾರ್ಯಾಚರಣೆ ಸ್ಥಗಿತಗೊಳ್ಳಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು: ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ (ಜುಲೈ 22) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 12 ಗಂಟೆಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದೆ.

BWSSB ಪ್ರಕಟಣೆ ಪ್ರಕಾರ, ಕಾವೇರಿ ನೀರು ಸರಬರಾಜು ಯೋಜನೆ ಹಂತ-4, ಮೊದಲ ಹಂತದ ಅಡಿಯಲ್ಲಿ 1200 ಮಿ.ಮೀ. ವ್ಯಾಸದ ಪೈಪ್‌ಲೈನ್‌ನಲ್ಲಿ ಅಳವಡಿಸಲಾಗಿರುವ 200 ಮಿ.ಮೀ. ಏರ್ ವಾಲ್ವ್ ಹಾಗೂ ಸ್ಲೂಯಿಸ್ ವಾಲ್ವ್‌ಗಳಲ್ಲಿ ಉಂಟಾಗಿರುವ ಸೋರಿಕೆಯನ್ನು ಸರಿಪಡಿಸುವ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಂಪಿಂಗ್ ಸ್ಟೇಷನ್‌ಗಳ ಕಾರ್ಯಾಚರಣೆ ಸ್ಥಗಿತಗೊಳ್ಳಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಿದೆ.

ಯಾವೆಲ್ಲ ಪ್ರದೇಶಗಳಿಗೆ ನೀರಿನ ಸಮಸ್ಯೆ?

ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿರುವ ಪ್ರಮುಖ ಪ್ರದೇಶಗಳು ಇಂತಿವೆ...

  • ರಾಜಾಜಿನಗರ

  • ಮಹಾಲಕ್ಷ್ಮಿ ಲೇಔಟ್

  • ನಂದಿನಿ ಲೇಔಟ್

  • ಬಸವೇಶ್ವರನಗರ

  • ವಿಜಯನಗರ

  • ನಾಗರಭಾವಿ

  • ಕಾಮಾಕ್ಷಿಪಾಳ್ಯ

  • ಯಶವಂತಪುರ

  • ಪೀಣ್ಯ

  • ದಾಸರಹಳ್ಳಿ

  • ಜಾಲಹಳ್ಳಿ

  • ಜೆ.ಪಿ.ನಗರ

  • ಬಿಟಿಎಂ ಲೇಔಟ್

  • ಎಚ್‌ಎಸ್‌ಆರ್ ಲೇಔಟ್

  • ಕೋರಮಂಗಲ

  • ಬೆಳ್ಳಂದೂರು

  • ಹಾಗೂ ಕಾವೇರಿ ಹಂತ-4, ಮೊದಲ ಹಂತದ ವ್ಯಾಪ್ತಿಯ ಇತರೆ ಪ್ರದೇಶಗಳು.

ನೀರು ಸಂಗ್ರಹಿಸಿಟ್ಟುಕೊಳ್ಳುವಂತೆ ಮನವಿ

ನೀರಿನ ಪೂರೈಕೆ ಸ್ಥಗಿತಗೊಳ್ಳುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿಯೇ ಸಂಗ್ರಹಿಸಿಕೊಂಡು, ಅಗತ್ಯ ಬಳಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ BWSSB ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಬೆಂಗಳೂರಿನಲ್ಲಿ 500 ರೂ. ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!