ಚನ್ನಮ್ಮ ದೇವೇಗೌಡ 
ರಾಜ್ಯ

ನನ್ನ ಪತ್ನಿ ಅನ್ನಪೂರ್ಣೆ; ನಾನು ಪ್ರಧಾನಿಯಾಗಲು ರಂಗನಾಥ ಸ್ವಾಮಿ, ಚೆನ್ನಮ್ಮ ಕಾರಣ: ಮಡದಿ ಅಂತ್ಯಕ್ರಿಯೆ ವೇಳೆ ಕಣ್ಣೀರಾದ ದೇವೇಗೌಡರು

ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಿತು. ಅಂತಿಮ ಕಾರ್ಯವಿಧಾನದ ವೇಳೆ ದೇವೇಗೌಡರು ಪತ್ನಿ ನೆನೆದು ಭಾವುಕರಾದರು.

ಹಾಸನ: ನನ್ನ ಪತ್ನಿ ಅನ್ನಪೂರ್ಣೆ, ಆಕೆಯನ್ನು ರಂಗನಾಥಸ್ವಾಮಿ ಪಾದಕ್ಕೆ ಕಳಿಸುತ್ತಿದ್ದೇನೆ ಎಂದು ಮಡದಿ ಚೆನ್ನಮ್ಮರನ್ನು ನೆನೆದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಕಣ್ಣೀರಿಟ್ಟರು.

ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಿತು. ಅಂತಿಮ ಕಾರ್ಯವಿಧಾನದ ವೇಳೆ ದೇವೇಗೌಡರು ಪತ್ನಿ ನೆನೆದು ಭಾವುಕರಾದರು.

ನಮ್ಮ ಮಕ್ಕಳು, ಅಳಿಯಂದಿರು, ಹೆಣ್ಣು ಮಕ್ಕಳು ಎಲ್ಲರೂ ಸೇರಿ ರಂಗನಾಥನ ಸಾನಿಧ್ಯದಲ್ಲಿ ಸಮಾಧಿ ಮಾಡಲು ತೀರ್ಮಾನಕ್ಕೆ ಬಂದಿದ್ದು. ಈ ಜಮೀನನ್ನು ಕ್ರಯಕ್ಕೆ ಬರೆಸಿಕೊಂಡು ಪಡವಲಹಿಪ್ಪೆಯಲ್ಲಿ ಮಾಡಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಆದರೆ ಮಕ್ಕಳು ಇಲ್ಲಿ ಮಾಡಲು ನಿರ್ಧಾರ ಮಾಡಿದ್ದಾರೆ. ನನ್ನ ಹೆಂಡತಿ ಅನ್ನಪೂರ್ಣೆ. ಇದನ್ನು ಉತ್ಪ್ರೇಕ್ಷೆಯಿಂದ ಮಾತನಾಡುತ್ತಿಲ್ಲ. ಅವರು ಹೇಗೆ ನಡೆದು ಬಂದ್ರು, ನನ್ನ ರಾಜಕೀಯ ಬೆಳವಣಿಗೆಗಾಗಲಿ ಹೇಗೆ ಸಹಕಾರ ನೀಡಿದ್ರು ಅಂತ ಹೇಳುತ್ತಿದ್ದೇನೆ. ಅವರನ್ನು ರಂಗನಾಥನ ಸಾನಿಧ್ಯಕ್ಕೆ ಕಳುಹಿಸಿಕೊಡುತ್ತಿದ್ದೇನೆ. ಇದನ್ನು ವಿಶ್ಲೇಷಣೆ ಮಾಡುವುದು ಕಷ್ಟ ಎಂದು ಭಾವುಕರಾದರು.

ನಾನು ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಯಲು ಕಾರಣನೇ ರಂಗನಾಥನ ಆಶೀರ್ವಾದ. ನನ್ನ ರಾಜಕೀಯ ಬೆಳವಣಿಗೆಗೆ ಶಕ್ತಿ ಕೊಟ್ಟಿದ್ದು ಇದೇ ರಂಗನಾಥಸ್ವಾಮಿ. ಇನ್ನೊಂದು ಕಡೆ ನನ್ನನ್ನು ಅಗಲಿ ಹೋಗಿರುವ, ನನ್ನನ್ನು ಬಿಟ್ಟು ಹೋಗಿರುವ ಚೆನ್ನಮ್ಮನೇ ಕಾರಣ. ನನ್ನ ಪ್ರತಿ ಹಂತದಲ್ಲಿ ನನಗೆ ಶಕ್ತಿ ತುಂಬಿದವರು. ನನ್ನ ಕುಟುಂಬದ ಎಲ್ಲರೂ ನನ್ನ ಬೆಳವಣಿಗೆಗೆ ಕಾರಣರಾಗಿದ್ದಾರೆ. ಹೀಗಾಗಿ ಕೊನೆಗೆ ನಮ್ಮ ಮಕ್ಕಳು ಇಲ್ಲಿ ಮಾಡೋಣ. ರಂಗನಾಥನ ಆಶೀರ್ವಾದ ದೇಶದ ಪ್ರಧಾನಿಯಾಗುವ ಮಟ್ಟಕ್ಕೆ ಮಾಡಿದೆ ಎಂದ್ರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: ‘ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ’; ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ನಿಂದ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ!

ದೆಹಲಿ: ಎಸ್. ಜೈಶಂಕರ್, ಮಾಜಿ ಸೇನಾ ಮುಖ್ಯಸ್ಥ ಹಾಗೂ ಸಿಬಿಐ ನಿರ್ದೇಶಕರಿಗೆ 'SIR' ನೋಟಿಸ್‌

ಅಸಹ್ಯಕರವಾಗಿ ಫೋಟೋ ತೆಗೆಯುವವರಿಗೆ ಹೊಡೆಯಿರಿ: ಶರ್ಟ್ ಬಿಚ್ಚಿ ಪಾಪರಾಜಿಗಳ ವಿರುದ್ಧ ಸಲ್ಮಾನ್ ಖಾನ್ ಗರಂ!

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video