ಸಾಂದರ್ಭಿಕ ಚಿತ್ರ 
ರಾಜ್ಯ

72,186 ಸರ್ಕಾರಿ ಹುದ್ದೆಗಳ ನೇಮಕಾತಿ: ಇಲಾಖೆಗಳಿಗೆ 10 ದಿನ ಗಡುವು

ಈ ಕುರಿತು ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಹುದ್ದೆಗಳ ಭರ್ತಿಗೆ ವೇಗ ನೀಡುವಂತೆ ಮುಖ್ಯಮಂತ್ರಿಗಳ (ಕಾರ್ಯಕ್ರಮ ಮತ್ತು ಯೋಜನಾ ಅನುಷ್ಠಾನ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸೂಚನೆ ನೀಡಿದ್ದಾರೆ.

ಈ ಕುರಿತು ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಗೆ ಪತ್ರ ಬರೆದಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ನೇರ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಮಂಜೂರಾದ ಹುದ್ದೆಗಳ ಬಲ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದ ಶೇ.80 ಹುದ್ದೆಗಳಿಗೆ "ಡೀಮ್ಡ್ ಅಪ್ರೂವಲ್" ಸೇರಿದಂತೆ ಒಟ್ಟು 72,186 ಹುದ್ದೆಗಳು ಇನ್ನೂ ಭರ್ತಿಯಾಗಬೇಕಿವೆ ಎಂದು ಉಲ್ಲೇಖಿಸಲಾಗಿದೆ.

ಈ ನೇಮಕಾತಿಯನ್ನು ಸರ್ಕಾರದ ಅತ್ಯುನ್ನತ ಆದ್ಯತೆ ಎಂದು ಬಣ್ಣಿಸಿರುವ ಮೌದ್ಗಿಲ್, ಎಲ್ಲಾ ಇಲಾಖೆಗಳು "ಮಿಷನ್ ಮೋಡ್"ನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರತಿ ಇಲಾಖೆ ತನ್ನ ವ್ಯಾಪ್ತಿಯಲ್ಲಿರುವ ಖಾಲಿ ಹುದ್ದೆಗಳ ಮಾಹಿತಿಯನ್ನು 10 ದಿನಗಳೊಳಗೆ ಅಪ್‌ಲೋಡ್ ಮಾಡಬೇಕು. ಜೊತೆಗೆ, ಮೇ 2023ಕ್ಕೂ ಮೊದಲು ಹಾಗೂ ಮೇ 2023ರ ನಂತರ ನೇಮಕಾತಿಗೆ ಅನುಮೋದನೆ ಪಡೆದ ಹುದ್ದೆಗಳ ಪ್ರತ್ಯೇಕ ವಿವರಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಎಲ್ಲಾ ನೇಮಕಾತಿ ಪ್ರಸ್ತಾವನೆಗಳನ್ನು ಕೆಇಎ ಮತ್ತು ಕೆಪಿಎಸ್‌ಸಿಗೆ 10 ದಿನಗಳೊಳಗೆ ಕಳುಹಿಸಬೇಕು. ಇಲಾಖಾ ಮಟ್ಟದಲ್ಲಿ ನಡೆಯುವ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸಬೇಕು. ಅಗತ್ಯವಿರುವ ಕ್ಯಾಡರ್ ಮತ್ತು ನೇಮಕಾತಿ (C & R) ನಿಯಮ ತಿದ್ದುಪಡಿ ಅಥವಾ ಅನುಮೋದನೆಗಳನ್ನು ಕೂಡಲೇ ಪಡೆಯಬೇಕು ಎಂದು ತಿಳಿಸಲಾಗಿದೆ.

ಸುಮಾರು ಮೂರು ವರ್ಷಗಳ ಹಿಂದೆ ಹಲವು ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದ್ದರೂ, ನೇಮಕಾತಿ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಒಟ್ಟು ಖಾಲಿ ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲೇ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಬಾಕಿ ಇವೆ ಎಂದು ತಿಳಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯ ಸಮನ್ವಯ ಹಾಗೂ ಗಡುವಿನೊಳಗೆ ಕಾರ್ಯ ಪೂರ್ಣಗೊಳಿಸುವ ಉದ್ದೇಶದಿಂದ ಪ್ರತಿಯೊಂದು ಇಲಾಖೆಯೂ ಉಪ ಕಾರ್ಯದರ್ಶಿ ಹುದ್ದೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಸೂಚಿಸಲಾಗಿದೆ.

ಆಡಳಿತಾತ್ಮಕ ಅಡೆತಡೆಗಳನ್ನು ನಿವಾರಿಸಿ, ನಿಗದಿತ ವೇಳಾಪಟ್ಟಿಯೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ 72,186 ಖಾಲಿ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಕಾಲಮಿತಿಯ ಯೋಜನೆಯಡಿ ಆರಂಭಿಸಲಾಗಿದೆ ಎಂದು ಘೋಷಿಸಿದ್ದರು. ಎರಡು ತಿಂಗಳೊಳಗೆ ನೇಮಕಾತಿ ಅಧಿಸೂಚನೆ, ನಾಲ್ಕು ತಿಂಗಳೊಳಗೆ ಪರೀಕ್ಷೆ ಹಾಗೂ ಆರು ತಿಂಗಳೊಳಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಅವರು ಹೇಳಿದ್ದರು.

ಇದಲ್ಲದೆ, 32,000ಕ್ಕೂ ಹೆಚ್ಚು ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಭರ್ತಿಯಾಗಲಿದ್ದು, ಇದರಿಂದ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ಸಾರ್ವಜನಿಕ ಸೇವೆಗಳ ವಿತರಣೆಯೂ ಮತ್ತಷ್ಟು ಬಲವಾಗಲಿದೆ ಎಂದು ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಬೀದಿಬದಿ ವ್ಯಾಪಾರಿಗಳಿಂದ GBA ಅಧಿಕಾರಿಗಳ ಮೇಲೆ ಹಲ್ಲೆ; ಪೆಪ್ಪರ್ ಸ್ಪ್ರೇ ಬಳಕೆ!

ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ!

ಶಿವಾಜಿನಗರ ಪುಟ್ ಬಾತ್ ಒತ್ತುವರಿ ತೆರವು: GBA ಅಧಿಕಾರಿಗಳ ಮೇಲೆ ಹಲ್ಲೆ, ಬಿಜೆಪಿ ತೀವ್ರ ಖಂಡನೆ! Video