ಅವೆನ್ಯೂ ರಸ್ತೆಯಲ್ಲಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸಿದ ನಂತರವೂ, ಬೀದಿ ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ಪುನರಾರಂಭಿಸಿದ್ದಾರೆ. 
ರಾಜ್ಯ

Gandhi Bazaarನಲ್ಲಿ ಗುರುತಿಸಲಾದ ಸ್ಥಳಗಳಲ್ಲೇ ಬೀದಿ ವ್ಯಾಪಾರಕ್ಕೆ ಅವಕಾಶ..!

ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಅಕ್ಷರಶಃ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯಿಂದ ಗುರುತಿಸಲಾದ ಸ್ಥಳಗಳಲ್ಲಷ್ಟೇ ಬೀದಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು.

ಬೆಂಗಳೂರು: ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿ ಬೀದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳಗಳನ್ನು ಗುರುತಿಸಿ, ಅಲ್ಲಿಯೇ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಬೆಂಗಳೂರು ಕೇಂದ್ರ ನಗರ ನಿಗಮದ (BCCC) ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.

ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿನ ಬೀದಿ ವ್ಯಾಪಾರಿಗಳಿಗೆ ನಿಗದಿತ ವ್ಯಾಪಾರ ಸ್ಥಳಗಳ ಹಂಚಿಕೆ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಅಕ್ಷರಶಃ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯಿಂದ ಗುರುತಿಸಲಾದ ಸ್ಥಳಗಳಲ್ಲಷ್ಟೇ ಬೀದಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಹೇಳಿದರು.

ಇದರಿಂದ ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ, ಸಾರ್ವಜನಿಕರಿಗೆ ಪಾದಚಾರಿ ಮಾರ್ಗಗಳು ಸುರಕ್ಷಿತವಾಗಿ, ಅಡೆತಡೆಗಳಿಲ್ಲದೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಬಿಸಿಸಿಸಿ ವತಿಯಿಂದ ಪಾದಚಾರಿ ಮಾರ್ಗದಲ್ಲಿ ಬಿಳಿ ಗೆರೆಯನ್ನು ಎಳೆದು ನಿಗದಿತ ವ್ಯಾಪಾರ ವಲಯಗಳನ್ನು ಗುರುತಿಸುವ ಕಾರ್ಯ ಆರಂಭಿಸಲಾಗಿದೆ. ಈ ಗುರುತುಗಳ ಉದ್ದೇಶ ಬೀದಿ ವ್ಯಾಪಾರಿಗಳನ್ನು ನಿಯಂತ್ರಿತ ಪ್ರದೇಶಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದರ ಜೊತೆಗೆ, ಪಾದಚಾರಿಗಳಿಗೆ ಮುಕ್ತವಾಗಿ ಸಂಚರಿಸಲು ಸಾಕಷ್ಟು ಜಾಗ ಉಳಿಯುವಂತೆ ನೋಡಿಕೊಳ್ಳುವುದಾಗಿದೆ.

ಸಭೆಯಲ್ಲಿ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ವೆಂಕಟಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಉಪ ಕಾನೂನು ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95, ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!