ಡಾ. ಜಿ. ಪರಮೇಶ್ವರ್ 
ರಾಜ್ಯ

ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು: ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ; ಸೋಮಣ್ಣ ಹೇಳಿಕೆಗೆ ಪರಮೇಶ್ವರ್ ಬೆಂಬಲ

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ

ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್​​ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಏರ್‌ಪೋರ್ಟ್​​ ನಿರ್ಮಿಸಿ ಎಂದು ಕಳೆದ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ‌ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ನಮಗೂ ಅನುಕೂಲವಾಗುತ್ತೆ ಎಂದವರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ ಎಂದು ಹೇಳಿದರು.

ತುಮಕೂರು ಲೋಕಸಭಾ ಸಂಸದ ಸೋಮಣ್ಣ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ಅವರಿಗೆ ಪ್ರಸ್ತಾವಿತ ವಿಮಾನ ನಿಲ್ದಾಣವನ್ನು ಸಿರಾದಲ್ಲಿ ಸ್ಥಾಪಿಸಬೇಕೆಂದು ಪತ್ರ ಬರೆದ ಕೆಲವು ದಿನಗಳ ನಂತರ ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20ರ ಪ್ರತಿಭಟನೆ ಕೇವಲ Trailer ಅಷ್ಟೇ, ಸರ್ಕಾರ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ: CJP ಹೊಸ ಎಚ್ಚರಿಕೆ

‘ಫ್ಲಾಫ್ ಸಾಂಗಿದು, ದಯವಿಟ್ಟು ನಿಲ್ಲಿಸಿ’: ನೆನಪಿರಲಿ ಪ್ರೇಮ್​​ಗೆ ನಾದಬ್ರಹ್ಮ ಹಂಸಲೇಖ ಹೀಗೆ ಹೇಳಿದ್ಯಾಕೆ ಗೊತ್ತಾ?

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ