ಚಿತ್ರದುರ್ಗದಲ್ಲಿ ಬೀದಿನಾಯಿಗಳ ಹಾವಳಿಗೆ ಬೇಸತ್ತು ಪೋಷಕರಿಂದ ದೂರು  
ರಾಜ್ಯ

ಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿಗೆ ನಾಲ್ವರು ಮಕ್ಕಳು ಗಂಭೀರ ಗಾಯ; ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ-Video

ಘಟನೆ ಬಳಿಕ ಮಕ್ಕಳ ಪೋಷಕರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೆಚ್ಚುತ್ತಿರುವ ಬೀದಿ ನಾಯಿ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ನಗರಸಭೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪ್ರತ್ಯೇಕ ಬೀದಿ ನಾಯಿ ದಾಳಿಗೆ ನಾಲ್ವರು ಪುಟ್ಟ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚುತ್ತಿರುವ ಬೀದಿ ನಾಯಿ ಹಾವಳಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪೋಷಕರು ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿದರು.

ಚೆಲಗೂಡ್ಡ ಹಾಗೂ ನೆಹರುನಗರ ಪ್ರದೇಶಗಳಲ್ಲಿ ಈ ಘಟನೆಗಳು ನಡೆದಿವೆ. ಐದರಿಂದ ಆರು ವರ್ಷದೊಳಗಿನ ಮಕ್ಕಳು ಮನೆಯ ಹೊರಗೆ ಆಟವಾಡುತ್ತಿದ್ದಾಗ ಮತ್ತು ಟ್ಯೂಷನ್‌ನಿಂದ ಮನೆಗೆ ಮರಳುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ.

ಗಾಯಗೊಂಡ ಮಕ್ಕಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಬಳಿಕ ಮಕ್ಕಳ ಪೋಷಕರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೆಚ್ಚುತ್ತಿರುವ ಬೀದಿ ನಾಯಿ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ನಗರಸಭೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ನಗರದಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೀದಿ ನಾಯಿ ಹಾವಳಿಯನ್ನು ನಿಯಂತ್ರಿಸಲು ತಕ್ಷಣವೇ ಶಾಶ್ವತ ಕ್ರಮ ಕೈಗೊಂಡು ಮಕ್ಕಳ ಸುರಕ್ಷತೆ ಖಚಿತಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20ರ ಪ್ರತಿಭಟನೆ ಕೇವಲ Trailer ಅಷ್ಟೇ, ಸರ್ಕಾರ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ ಲಗ್ಗೆ: CJP ಹೊಸ ಎಚ್ಚರಿಕೆ

‘ಫ್ಲಾಫ್ ಸಾಂಗಿದು, ದಯವಿಟ್ಟು ನಿಲ್ಲಿಸಿ’: ನೆನಪಿರಲಿ ಪ್ರೇಮ್​​ಗೆ ನಾದಬ್ರಹ್ಮ ಹಂಸಲೇಖ ಹೀಗೆ ಹೇಳಿದ್ಯಾಕೆ ಗೊತ್ತಾ?

US-Iran ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಹೆಚ್ಚಳ; ಜೂನ್ ನಂತರ ಸಾರ್ವಕಾಲಿಕ ಏರಿಕೆ!

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್