ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿ ಸೇರಿದಂತೆ‌ ದಲಿತ ಜನಾಗ್ರಹ ಸಮಾವೇಶದ ಹಕ್ಕೊತ್ತಾಯಗಳ ಕುರಿತು ವಿವಿಧ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಡಿಸಿಎಂ ಡಾ ಪರಮೇಶ್ವರ್ 
ರಾಜ್ಯ

SC/ST ಬ್ಯಾಕ್‌ಲಾಗ್ ಹುದ್ದೆಗಳ ಶೀಘ್ರ ಭರ್ತಿ: DCM ಪರಮೇಶ್ವರ್

ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಮೀಸಲಾತಿ ನಿಯಮದಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಇತರೆ ಸರ್ಕಾರಿ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ಗಳಿಗೆ ಮೀಸಲಾಗಿರುವ ಖಾಲಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ದಲಿತರ ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಮೀಸಲಾತಿ ನಿಯಮದಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಇದಲ್ಲದೆ, ವಿವಿಧ ವರ್ಗಗಳಿಗೆ ಮೀಸಲಾಗಿದ್ದ ಅನೇಕ ಹುದ್ದೆಗಳು ಇನ್ನೂ ಖಾಲಿ ಉಳಿದಿವೆ. ವಿಶ್ವವಿದ್ಯಾಲಯಗಳು ಹಾಗೂ ಕೆಲವು ಪ್ರಮುಖ ಇಲಾಖೆಗಳಲ್ಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಪಿಟಿಸಿಎಲ್ (PTCL) ಕಾಯ್ದೆ ತಿದ್ದುಪಡಿ ಕುರಿತು ಮಾತನಾಡಿದ ಅವರು, ದಲಿತರಿಗೆ ಮಂಜೂರಾಗಿದ್ದ ಭೂಮಿಯನ್ನು ಇತರರಿಗೆ ವರ್ಗಾಯಿಸಲು ಅನುಕೂಲವಾಗುವಂತೆ ಕಾಯ್ದೆಯಲ್ಲಿದ್ದ ಡಿ (D) ಕಲಂವನ್ನು ತೆಗೆದುಹಾಕಲಾಗಿದೆ. ಆದರೆ ಇದರ ಅನುಷ್ಠಾನ ವಿಳಂಬವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ವಿಷಯದಲ್ಲಿ ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ನಿಯೋಗಕ್ಕೆ ಭರವಸೆ ನೀಡಿದ್ದೇನೆ ಎಂದರು.

ಕೆಲವು ದಲಿತ ಸಂಘರ್ಷ ಸಮಿತಿ (DSS) ಮುಖಂಡರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭ ದಲಿತ ಸಮುದಾಯಕ್ಕೆ ತಲುಪುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯದಿರುವ ದಲಿತ ಕುಟುಂಬಗಳನ್ನು ಗುರುತಿಸಿ, ಅವರಿಗೆ ಸೌಲಭ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಸ್ತುತ ವಿದ್ಯಾರ್ಥಿಯೊಬ್ಬರಿಗೆ ನೀಡಲಾಗುತ್ತಿರುವ 1,800 ಸ್ನಾತಕೋತ್ತರ ವಿದ್ಯಾರ್ಥಿವೇತನ (ಪೋಸ್ಟ್‌-ಮೆಟ್ರಿಕ್ ಸ್ಕಾಲರ್‌ಶಿಪ್) ವನ್ನು 3,000 ರೂಪಾಯಿಗೆ ಹೆಚ್ಚಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಪರಿಷ್ಕರಿಸಲಾಗುವುದು. ಮುಂದಿನ ಬಜೆಟ್‌ನಲ್ಲಿ ಇದನ್ನು ಸೇರಿಸಲಾಗುವುದು ಎಂದು ಭರವಸೆ ನೀಡಿದರು.

ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಡಾ. ಪರಮೇಶ್ವರ್ ಹೇಳಿದರು.

ಕಳೆದ ವರ್ಷ ವಿಶೇಷಚೇತನರ ವಿಶ್ವಕಪ್ ಕ್ರಿಕೆಟ್ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿದ್ದ ನೀಲವ್ವ ನಿಂಗವ್ವ ಹರಿಜನ್ ಅವರು ಶೆಡ್‌ನಲ್ಲಿ ವಾಸಿಸುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವರ್ಷ ಸರ್ಕಾರದಿಂದ 5 ಲಕ್ಷ ರೂಪಾಯಿ ನೆರವು ನೀಡಲಾಗಿದೆ. ಶೀಘ್ರದಲ್ಲೇ ಅವರಿಗೆ ವಸತಿ ನಿವೇಶನವನ್ನೂ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಪ್ರೊ. ಇಂದಿರಾ ಕೃಷ್ಣಪ್ಪ, ಎಂ. ವೆಂಕಟಸ್ವಾಮಿ, ಶ್ರೀಧರ್ ಕಾಳಿವೀರ, ಸುಬ್ಬು ಹೊಲೆಯಾರ್, ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕ್ರೋಚ್​ಗಳ ಮೇಲೆ ಲಾಠಿಚಾರ್ಜ್: ವಿಡಿಯೋ ನೋಡಲು ಟೈಮ್ ಇಲ್ಲ - ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಜುಲೈ 20ರ ಪ್ರತಿಭಟನೆ ಕೇವಲ Trailer ಅಷ್ಟೇ, ಸರ್ಕಾರ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ ಲಗ್ಗೆ: CJP ಹೊಸ ಎಚ್ಚರಿಕೆ

‘ಫ್ಲಾಫ್ ಸಾಂಗಿದು, ದಯವಿಟ್ಟು ನಿಲ್ಲಿಸಿ’: ನೆನಪಿರಲಿ ಪ್ರೇಮ್​​ಗೆ ನಾದಬ್ರಹ್ಮ ಹಂಸಲೇಖ ಹೀಗೆ ಹೇಳಿದ್ಯಾಕೆ ಗೊತ್ತಾ?

US-Iran ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಹೆಚ್ಚಳ; ಜೂನ್ ನಂತರ ಸಾರ್ವಕಾಲಿಕ ಏರಿಕೆ!

CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್‌ಐಆರ್ ದಾಖಲು