ಮೃತ ಬಾಲಕಿ ಚಿರನ್ವಿ 
ರಾಜ್ಯ

ಬಂಟ್ವಾಳ: ಸಂಚರಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ; 4 ವರ್ಷದ ಬಾಲಕಿ ಸಾವು, ಹಲವರಿಗೆ ಗಾಯ

ಮೃತಳನ್ನು ಚಿರನ್ವಿ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಬುಧವಾರ ಬೃಹತ್ ಮರವೊಂದು ಉರುಳಿ ಶಾಲಾ ಬಸ್ ಮೇಲೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಮೃತಳನ್ನು ಚಿರನ್ವಿ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲಡ್ಕದ ಶ್ರೀ ರಾಮ ಶಾಲೆಗೆ ಸೇರಿದ ಬಸ್ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದೆ.

ಸಂಜೆ ಮಕ್ಕಳನ್ನು ಬಿಡಲು ಎಂದಿನಂತೆಯೇ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದಿಂದ ಬಸ್ ಹೊರಟಿತ್ತು. ಕೆಲ ಮಕ್ಕಳನ್ನು ಇಳಿಸಿದ ಬಳಿಕ ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರ ಸಂಚರಿಸುತ್ತಿದ್ದ ಬಸ್ ಮೇಲೆ ಬಿದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ

ಅಮೆರಿಕ ಬೆದರಿಕೆಗೆ Iran ತಿರುಗೇಟು: 'ಕಣ್ಣಿಗೆ ಕಣ್ಣು' ಉತ್ತರ, ಮೂಲಸೌಕರ್ಯಗಳ ಮೇಲೆ ದಾಳಿಯಾದರೆ ಪ್ರಬಲ ಪ್ರತೀಕಾರ ಎಂದ ಟೆಹ್ರಾನ್

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ': ನಮ್ಮತ್ತ ಬೆರಳು ತೋರಿಸುವ ಮೊದಲು ನಿಮ್ಮ ದೇಶ ನೋಡಿಕೊಳ್ಳಿ; ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು..!

ನೆತನ್ಯಾಹು ಮಾಸ್ಟರ್ ಪ್ಲ್ಯಾನ್ ಲೀಕ್? ಸದ್ದಿಲ್ಲದೆ ಗೂಢಚಾರರ ಜಾಲ ಧ್ವಂಸಗೊಳಿಸಿದ ಮೊಜ್ತಬಾ ಖಮೇನಿ..?

'ಶಾಂತಿಯುತ ಹೋರಾಟ ಹಿಂಸೆಗೆ ತಿರುಗಿದ್ದು ನೋವಾಗಿದೆ', ವಿದ್ಯಾರ್ಥಿಗಳ ಹೋರಾಟ ರಾಜಕೀಯದ ಅಸ್ತ್ರವಾಗಬಾರದು: NEET ಪ್ರತಿಭಟನೆಗೆ Salman Khan ಬೆಂಬಲ