ದತ್ತು 
ರಾಜ್ಯ

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಮೇಲೆ ಹಲ್ಲೆ

ಇಂದು ಬೆಳಗಿನ ಜಾವ ಸುಮಾರು 2:17 ರ ಸುಮಾರಿಗೆ ಹಲ್ಲೆ ನಡೆದಿದ್ದು, ಟಂ-ಟಂ ಚಾಲಕನನ್ನು 19 ವರ್ಷದ ದತ್ತು ಎಂದು ಗುರುತಿಸಲಾಗಿದೆ.

ಕಲಬುರಗಿ: ಇಷ್ಟು ದಿನ ಶಾಂತವಾಗಿದ್ದ ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ದೇವಲಗಾಣಗಾಪುರದಲ್ಲಿ ಶುಕ್ರವಾರ ಟಂ-ಟಂ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ.

ಇಂದು ಬೆಳಗಿನ ಜಾವ ಸುಮಾರು 2:17 ರ ಸುಮಾರಿಗೆ ಹಲ್ಲೆ ನಡೆದಿದ್ದು, ಟಂ-ಟಂ ಚಾಲಕನನ್ನು 19 ವರ್ಷದ ದತ್ತು ಎಂದು ಗುರುತಿಸಲಾಗಿದೆ.

ಕೇವಲ 'ದಿಟ್ಟಿಸಿ ನೋಡಿದ' ಎಂಬ ವಿಚಾರವೇ ನೆಪವಾಗಿ, ಟಂ-ಟಂ ಚಾಲಕನಾಗಿದ್ದ ಯುವಕ ದತ್ತು ಎಂಬವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ದೇವಲಗಾಣಗಾಪುರದ ಸಂಗಮ ರಸ್ತೆಯಲ್ಲಿರುವ ಅವಧೂತ ಆಶ್ರಮದ ಸಮೀಪ ಈ ಕ್ರೌರ್ಯ ನಡೆದಿದ್ದು, ದತ್ತು ಮೇಲೆ ಅದೇ ಗ್ರಾಮದ ಪ್ರಜ್ವಲ್ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಎಂಬಿಬ್ಬರು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ದತ್ತು ಅವರನ್ನು ತಕ್ಷಣವೇ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 'ಆರೋಪಿಗಳು, ನಾನು ಅವರನ್ನು ದಿಟ್ಟಿಸಿ ನೋಡಿದೆ' ಎಂಬ ಕ್ಷುಲ್ಲಕ ನೆಪವನ್ನಿಟ್ಟುಕೊಂಡು ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಯುವಕ ಆಸ್ಪತ್ರೆಯಲ್ಲಿದ್ದಾಗ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚಂದನವನದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

'ನಟಿ ಮಮಿತಾ ಬೈಜುರನ್ನೇ ಮದುವೆಯಾಗುತ್ತೇನೆ, ಬೇರೆ ಮಹಿಳೆಗೆ ಜಾಗವಿಲ್ಲ, ವಯಸ್ಸಿನ ಅಂತರ ಇರಬಹುದು, ಆದ್ರೆ...'

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ