ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಕ್ಕಳು ಆತ್ಮಹತ್ಯೆ 
ರಾಜ್ಯ

ಕೋಲಾರ: ಮನೆ ಕಟ್ಟಲು ಸಾಲ; ಹಣಕೊಟ್ಟವರ ಕಿರುಕುಳ; ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಇನ್ನೂ ಸುರೇಶ್ ಆಟೋ ಚಾಲಕನಾಗಿದ್ದರೂ ತನ್ನಿಬ್ಬರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿದ್ದಾನೆ. ಆದರೆ ಇತ್ತೀಚೆಗೆ ಮನೆ ಕಟ್ಟಲು ಕೈಸಾಲ ಸೇರಿದಂತೆ ಸಂಘ ಸಂಸ್ಥೆಗಳ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಕೋಲಾರ: ಸಾಲಭಾದೆ ಸಾಲಗಾರರ ಕಿರುಕುಳದಿಂದ ತನ್ನಿಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡದಲ್ಲಿ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕು ಛತ್ರಕೋಡಿಹಳ್ಳಿ ಬಳಿಯ ಕೃಷಿ ಹೊಂಡದಲ್ಲಿ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ತಾಯಿ ಪ್ರಮೀಳ (40) ಮಗಳು ಸ್ವಪ್ನ (22) ಹಾಗೂ ಮಗ ಚರಣ್ (18) ಮೃತ ದುರ್ದೈವಿಗಳು.

ಇತ್ತೀಚೆಗೆ ಮನೆ ಕಟ್ಟಲು ಸುಮಾರು 15 ಲಕ್ಷ ಕೈ ಸಾಲ ಮಾಡಿಕೊಂಡಿದ್ದು, ಪದೆ ಪದೆ ಖಾಸಗಿ ಫೈನಾನ್ಸ್ ನವರ ಕಾಟ, ಇತ್ತ ಸಂಘಗಳಲ್ಲಿ ಸಾಲ ಪಡೆದಿದ್ದವರ ಕಾಟದಿಂದ ನಿನ್ನೆ ರಾತ್ರಿ ಮನೆಯಲ್ಲಿ ಪತಿ ಸುರೇಶ್ ಜೊತೆಗೆ ಗಲಾಟೆ ಮಾಡಿಕೊಂಡಿರುವ ಪ್ರಮೀಳ, ರಾತ್ರಿ 1 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ಸುರೇಶ್ ಆಟೋ ಚಾಲಕನಾಗಿದ್ದರೂ ತನ್ನಿಬ್ಬರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿದ್ದಾನೆ. ಆದರೆ ಇತ್ತೀಚೆಗೆ ಮನೆ ಕಟ್ಟಲು ಕೈಸಾಲ ಸೇರಿದಂತೆ ಸಂಘ ಸಂಸ್ಥೆಗಳ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇನ್ನೂ ಪ್ರಮೀಳ ಸಹ ಮನೆ ಮನೆ ಕೆಲಸ ಮಾಡಿಕೊಂಡು ಮನೆ ನಿರ್ವಹಣೆ ಮಾಡುತ್ತಿದ್ದಳು. 15 ಲಕ್ಷ ಸಾಲ ಮಾಡಿಕೊಂಡಿರುವ ಸುರೇಶ್ ಕಳೆದ ರಾತ್ರಿ ಆಟೋ ಚಾಲನೆ ಮಾಡಿ ಮನೆಗೆ ಬಂದ ಸಂದರ್ಭದಲ್ಲಿ ಪತಿ-ಪತ್ನಿ ಮಧ್ಯೆ ಗಲಾಟೆಯಾಗಿದೆ ಎನ್ನಲಾಗಿದೆ.

ಈ ವೇಳೆ ಮನೆಯಿಂದ ಹೊರ ಹೋಗಿರುವ ತಾಯಿ ಮಕ್ಕಳು ಮನೆಗೆ ಬಂದಿಲ್ಲ. ರಾತ್ರಿಯೆಲ್ಲಾ ಪತಿ ಸುರೇಶ್ ತನ್ನ ಪತ್ನಿ ಹಾಗೂ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೆ ಫೋನ್ ಮಾಡಿದಾಗ ಸಂಬಂಧಿಕರ ಮನೆಗೆ ಬಂದಿರುವುದಾಗಿ ಹೇಳಿದ್ದರು.

ಹಾಗಾಗಿ ಸುಮ್ಮನಾದೆ. ಆದರೆ ಬೆಳಗಾಗುವವಷ್ಟರಲ್ಲಿ ಹೀಗೆ ಶವಗಳಾಗಿ ಪತ್ತೆಯಾಗಿದ್ದಾರೆ ಎಂದು ಸುರೇಶ್ ಹೇಳಿದ್ದಾರೆ. ಇನ್ನೂ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ, ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?

DEMOCRACY WINS!; ಪ್ರಧಾನ್ ರಾಜಿನಾಮೆ ಬಳಿಕ ಸಿಜೆಪಿ ಮೊದಲ ಪ್ರತಿಕ್ರಿಯೆ, ಜಂತರ್ ಮಂತರ್ ನಲ್ಲಿ ವಿಜಯೋತ್ಸವ!

ಈ ಹೇಡಿ ಕೃತ್ಯಕ್ಕೆ ನಾವು ಹೆದರಲ್ಲ: ಸಿಜೆಪಿಗೆ ಆಹಾರ ನೀಡುತ್ತಿದ್ದ ಜುನೈದ್ ಮನೆ ಮೇಲೆ ಉತ್ತರಪ್ರದೇಶ ಪೊಲೀಸ್ ದಾಳಿಗೆ CJP ತೀಕ್ಷ್ಣ ಪ್ರತಿಕ್ರಿಯೆ!

6 ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ

'10 ದಿನಗಳ ಬೆಳವಣಿಗೆ ಅತ್ಯಂತ ದುಃಖಿತಗೊಳಿಸಿದ್ದು, ದೇಶವಿರೋಧಿ ಶಕ್ತಿಗಳು ಪರಿಸ್ಥಿತಿ ದುರುಪಯೋಗ ಪಡಿಸಿಕೊಳ್ಳಬಾರದು'