ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು ವಿಭಾಗದ ಒಂಬತ್ತು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಸಾಮಾನ್ಯವಾಗಿ 223 ಮಿ.ಮೀ. ಮಳೆಯಾಗಬೇಕಿದ್ದರೆ, ಈ ಬಾರಿ ಕೇವಲ 141 ಮಿ.ಮೀ. ಮಳೆಯಾಗಿದೆ. ಅಂದರೆ ಶೇ.37ರಷ್ಟು ಮಳೆ ಕೊರತೆ ಉಂಟಾಗಿದೆ.

ಚಿತ್ರದುರ್ಗ: ರಾಜ್ಯದ ರೈತರು ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶನಿವಾರ ಮನವಿ ಮಾಡಿದೆ,

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ವಿಭಾಗದ ಒಂಬತ್ತು ಜಿಲ್ಲೆಗಳ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದರು.

ಜೂನ್ ತಿಂಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಿದ್ದು, ಎಲ್ಲ ಪ್ರದೇಶಗಳಿಗೂ ಸಮರ್ಪಕ ಮಳೆ ಬಂದಿಲ್ಲ. ಜುಲೈ ಅಂತ್ಯದ ವೇಳೆಗೆ ರಾಜ್ಯದಲ್ಲಿ ಶೇ.42ಕ್ಕಿಂತ ಹೆಚ್ಚು ಮಳೆ ಕೊರತೆ ದಾಖಲಾಗಿದೆ. ಇದರಿಂದ ರಾಜ್ಯದಲ್ಲಿ ಕೇವಲ ಶೇ.15ರಷ್ಟು ಮಾತ್ರ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಬೆಂಗಳೂರು ವಿಭಾಗದ ಒಂಬತ್ತು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಸಾಮಾನ್ಯವಾಗಿ 223 ಮಿ.ಮೀ. ಮಳೆಯಾಗಬೇಕಿದ್ದರೆ, ಈ ಬಾರಿ ಕೇವಲ 141 ಮಿ.ಮೀ. ಮಳೆಯಾಗಿದೆ. ಅಂದರೆ ಶೇ.37ರಷ್ಟು ಮಳೆ ಕೊರತೆ ಉಂಟಾಗಿದೆ. ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದ್ದು, ಉಳಿದ ಏಳು ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.

ವಿಪತ್ತು ನಿರ್ವಹಣಾ ಇಲಾಖೆಯಡಿ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಗಳಲ್ಲಿ ಒಟ್ಟು ರೂ.54.45 ಕೋಟಿ ಲಭ್ಯವಿದೆ. ತುಮಕೂರು ಜಿಲ್ಲೆಗೆ ರೂ.11.58 ಕೋಟಿ, ಕೋಲಾರಕ್ಕೆ ರೂ.9.24 ಕೋಟಿ, ಬೆಂಗಳೂರು ದಕ್ಷಿಣಕ್ಕೆ ರೂ.8.70 ಕೋಟಿ, ಬೆಂಗಳೂರು ಗ್ರಾಮಾಂತರಕ್ಕೆ ರೂ.7.56 ಕೋಟಿ, ಚಿತ್ರದುರ್ಗಕ್ಕೆ ರೂ.4.35 ಕೋಟಿ, ಚಿಕ್ಕಬಳ್ಳಾಪುರಕ್ಕೆ ರೂ.4.26 ಕೋಟಿ, ಶಿವಮೊಗ್ಗಕ್ಕೆ ರೂ.2.41 ಕೋಟಿ, ದಾವಣಗೆರೆಗೆ ರೂ.1.80 ಕೋಟಿ ಹಾಗೂ ಬೆಂಗಳೂರು ನಗರಕ್ಕೆ ರೂ.1.10 ಕೋಟಿ ಲಭ್ಯವಿದ್ದು, ಅಗತ್ಯ ಕಾರ್ಯಗಳಿಗೆ ಈ ಅನುದಾನವನ್ನು ಬಳಸಿಕೊಳ್ಳಬಹುದು ಎಂದು ಹೇಳಿದರು.

ಸಭೆಯಲ್ಲಿ ಡಿಸಿಎಂ, ಇ-ಪೌತಿ (e-Pauti) ಯೋಜನೆಯಡಿ ಬಾಕಿ ಉಳಿದಿರುವ ಎಲ್ಲ ಕಾರ್ಯಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ವಿಭಾಗದಲ್ಲಿ ಇ-ಪೌತಿ ಯೋಜನೆಯಡಿ ಒಟ್ಟು 14,63,968 ಅರ್ಜಿಗಳನ್ನು ಗುರಿಯಾಗಿರಿಸಲಾಗಿದ್ದು, ಗ್ರಾಮ ಆಡಳಿತಾಧಿಕಾರಿಗಳ ಮಟ್ಟದಲ್ಲಿ ಇದುವರೆಗೆ 3,04,889 ಅರ್ಜಿಗಳ ವಿಲೇವಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸುವುದಿಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ ಹುಡುಕುತ್ತೇನೆ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ಅಗ್ನಿಶಾಮಕ, ತುರ್ತು ಸೇವೆಗಳ ಆಧುನೀಕರಣಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ