ಕಾರ್ಗಿಲ್ ವಿಜಯ್ ದಿನ ಆಚರಣೆ  
ರಾಜ್ಯ

ಧರ್ಮೇಂದ್ರ ಪ್ರಧಾನ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿಲ್ಲ; ವಿದ್ಯಾರ್ಥಿಗಳೇ ಹುದ್ದೆ ತೊರೆಯುವಂತೆ ಮಾಡಿದರು: CM ಡಿ.ಕೆ. ಶಿವಕುಮಾರ್-Video

ಬೆಂಗಳೂರಿನ ಜವಹರಲಾಲ ನೆಹರೂ ತಾರಾಲಯದಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿಲ್ಲ; ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಧ್ವನಿಯಿಂದ ಅವರು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನ ಜವಹರಲಾಲ ನೆಹರೂ ತಾರಾಲಯದಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಸಾಧಿಸಿದ ವಿಜಯವನ್ನು ಮತ್ತು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಸಮಾರಂಭದಲ್ಲಿ ಮಿಲಿಟರಿ ಸಿಬ್ಬಂದಿಯು ಹುತಾತ್ಮ ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು. ಸಲಾಮಿ ಶಸ್ತ್ರ ಮತ್ತು ಶೋಕ ಶಸ್ತ್ರದೊಂದಿಗೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಮಹಾನ್ ತ್ಯಾಗವನ್ನು ಸ್ಮರಿಸಲಾಯಿತು.

ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರ ಹಿತಾಸಕ್ತಿ ಮತ್ತು ಕಾಳಜಿಯನ್ನು ಗೌರವಿಸಿ ರಕ್ಷಿಸಬೇಕು ಎಂದು ಹೇಳಿದರು.

ದೇಶದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿಲ್ಲ; ಅವರಿಂದ ರಾಜೀನಾಮೆ ಕೊಡಿಸಲಾಗಿದೆ. ಇದು ಯಾವುದೇ ರಾಜಕೀಯ ಪಕ್ಷದ ಅಥವಾ ಸರ್ಕಾರದ ಇಚ್ಛೆಯಾಗಿರಲಿಲ್ಲ. ದೇಶದ ವಿದ್ಯಾರ್ಥಿಗಳು, ಯುವಜನರು ಮತ್ತು 130 ಕೋಟಿ ಜನರ ಆಶಯವೇ ದೇಶದ ಭವಿಷ್ಯವನ್ನು ನಾವು ಕಾಪಾಡಬೇಕು ಎಂಬುದಾಗಿತ್ತು ಎಂದು ಶಿವಕುಮಾರ್ ಹೇಳಿದರು.

ದೇಶದ ಭವಿಷ್ಯ ವಿದ್ಯಾರ್ಥಿಗಳು ಮತ್ತು ಯುವಜನರ ಕೈಯಲ್ಲಿದ್ದು, ಅವರ ಹಿತಾಸಕ್ತಿಯನ್ನು ರಕ್ಷಿಸುವುದು ದೇಶದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಈ ವಿಚಾರವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹಲವು ವಾರಗಳ ಪ್ರತಿಭಟನೆಗಳ ಬಳಿಕ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿನ್ನೆ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಪ್ರತಿಭಟನೆಗಳಿಗೆ ನೇತೃತ್ವ ವಹಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP), ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ನಿರಂತರವಾಗಿ ಆಗ್ರಹಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

'ವಿದ್ಯಾರ್ಥಿಗಳ ಮೇಲಿನ ಕ್ರೌರ್ಯಕ್ಕೆ ಹೊಣೆ ಯಾರು?' ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ; ಪೊಲೀಸ್ ದೌರ್ಜನ್ಯಕ್ಕೆ ಉತ್ತರಿಸುವಂತೆ ಆಗ್ರಹ

ಪ್ರಧಾನ್ ರಾಜೀನಾಮೆ ಸಾಲದು; ಪಾರದರ್ಶಕ ಪರೀಕ್ಷೆ, ಕೈಗೆಟುಕುವ ಶಿಕ್ಷಣಕ್ಕೆ ಒತ್ತು ನೀಡಿ: ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಶಿಕ್ಷಣ ಸಚಿವಾಲಯದ ಚುಕ್ಕಾಣಿ ಹಿಡಿದ ಪ್ರಹ್ಲಾದ್ ಜೋಶಿ: ಕರ್ತವ್ಯ ಪ್ರಜ್ಞೆ-ನಮ್ರತೆಯಿಂದ ಹೊಸ ಜವಾಬ್ದಾರಿ ಸ್ವೀಕರಿಸುವೆ ಎಂದ ಸಚಿವ

'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ: ಹೊಸ Video ಬಿಡುಗಡೆ ಮಾಡಿದ Cockroach Janata Party