ಆರೋಪಿಗಳಾದ ಸುಪ್ರಿಯಾ, ಸಚಿನ್ 
ರಾಜ್ಯ

ಹಾವೇರಿ: ತನ್ನ ಜೊತೆ ಮಲಗುವಂತೆ ಮಹಿಳೆಗೆ ಒತ್ತಡ; ಖಾಸಗಿ ಫೋಟೋ, ವಿಡಿಯೋ ಲೀಕ್ ಬೆದರಿಕೆ, ಆರೋಪಿ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಹಾವೇರಿಯ ಬಸವೇಶ್ವರ ನಗರದ ನಿವಾಸಿ ಸಚಿನ್ ದಾನಪ್ಪನವರ್ ಮತ್ತು ಆತನ ಪತ್ನಿ ಸುಪ್ರಿಯಾ ಸಚಿನ್ ದಾನಪ್ಪನವರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಜುಲೈ 22ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನ ಪ್ರಕಾರ, ಜುಲೈ 12ರ ರಾತ್ರಿ ಸಚಿನ್ ಮಹಿಳೆ ತನ್ನ ಲೈಂಗಿಕ ಬೇಡಿಕೆಗಳನ್ನು ಪೂರೈಸದಿದ್ದರೆ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಫೋನ್‌ಪೇ ಮೂಲಕ ದೂರುದಾರಳ ಪತಿಗೆ ಅಶ್ಲೀಲ ಫೋಟೋವೊಂದನ್ನು ಕಳುಹಿಸಿದ್ದಾನೆ ಎಂಬ ಆರೋಪವೂ ಇದೆ.

ಸಚಿನ್ ಫೋಟೋಗಳು ಮತ್ತು ವೀಡಿಯೊಗಳನ್ನು ಬಳಸಿ ತನಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಕುಟುಂಬ ಸದಸ್ಯರು ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೇ ಹುಬ್ಬಳ್ಳಿಯಲ್ಲಿ ಓದುತ್ತಿರುವ ಸಂತ್ರಸ್ತೆಯ ಮಗಳನ್ನು ಅವಮಾನಿಸುವುದಾಗಿಯೂ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಸಚಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾದ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಮಂಡನೆ; Video

ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ; ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ಸಿದ್ಧರಾಗಿ: ಸಿಟಿ ರವಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

E20 ಡೀಪ್‌ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!

ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ನಿವೃತ್ತಿ: ಸಚಿವ ಯತೀಂದ್ರ ಹೇಳಿದ್ದೇನು ಗೊತ್ತಾ? Video

40 ನಿಮಿಷ ಪೊಲೀಸ್ ವ್ಯಾನ್ ತಡೆದಿದ್ದ 'ಗಟ್ಟಿಗಿತ್ತಿ'ಗೇ ಕಿರುಕುಳ: ದೂರು ದಾಖಲಿಸಿದ ವೈರಲ್ ಯುವತಿ!