ನವೀನ್ ಕುಮಾರ್ ಬಳಗಾರ್ 
ರಾಜ್ಯ

ಶಿವಮೊಗ್ಗದ ಲಾಡ್ಜ್‌ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ಶಿವಮೊಗ್ಗದ ಲಾಡ್ಜ್‌ ಒಂದರಲ್ಲಿ ಸೋಮವಾರ ಕ್ರಷರ್ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ನಿಗೂಢವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಬಸವರಾಜ್ ಅವರು ನಗರದ ಲಾಡ್ಜ್‌ ಒಂದರಲ್ಲಿ ರೂಂ ಪಡೆದು, ಅಲ್ಲಿಯೇ ಅವರು ನೇಣಿಗೆ ಶರಣಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಮಂಡನೆ; Video

E20 ಡೀಪ್‌ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!

ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ನಿವೃತ್ತಿ: ಸಚಿವ ಯತೀಂದ್ರ ಹೇಳಿದ್ದೇನು ಗೊತ್ತಾ? Video

40 ನಿಮಿಷ ಪೊಲೀಸ್ ವ್ಯಾನ್ ತಡೆದಿದ್ದ 'ಗಟ್ಟಿಗಿತ್ತಿ'ಗೇ ಕಿರುಕುಳ: ದೂರು ದಾಖಲಿಸಿದ ವೈರಲ್ ಯುವತಿ!

"ಪ್ರತಿಭಟನೆ ನಡೆಸುತ್ತಿದ್ದಾರೆ" ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್