ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ  
ರಾಜ್ಯ

'ನಿನ್ನ ರೇಟ್ ಎಷ್ಟು?': ಬೆಂಗಳೂರಿನಲ್ಲಿ ಮಹಿಳೆ ಮೇಲೆ ಲೈಂಗಿಕ ಕಿರುಕುಳ, ಆರೋಪಿ ಗುರುತು ಪತ್ತೆ-Video

ಮಹಿಳೆ ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ತಾನು ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾದನು ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬೆಂಗಳೂರು ಪೊಲೀಸರ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಹಿಳೆಯ ಹೇಳಿಕೆಯ ಪ್ರಕಾರ, ಕ್ಯಾಬ್‌ಗಾಗಿ ಕಾಯುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ "ನಿನ್ನ ರೇಟ್ ಎಷ್ಟು?" ಎಂದು ಕೇಳಿದ್ದು, ಬೆದರಿಕೆ ಹುಟ್ಟಿಸುವ ರೀತಿಯ ಮಾತುಗಳನ್ನೂ ಆಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮಹಿಳೆ, "ಒಬ್ಬ ಮಹಿಳೆಯಾಗಿ ನಾನು ಕ್ಯಾಬ್‌ಗಾಗಿ ಕಾಯುವಾಗ ನನ್ನನ್ನು ವಸ್ತುವಿನಂತೆ ಕಾಣುವುದು ಅಥವಾ ಹಣಕ್ಕಾಗಿ ಕೇಳುವುದು ಮಹಿಳೆಯರ ಸುರಕ್ಷಿತತೆಯನ್ನು ಪ್ರಶ್ನೆ ಮಾಡುವಂತೆ ಮಾಡಿದೆ. ಅವನ ಮಾತುಗಳು ಬೆದರಿಕೆ ಹುಟ್ಟಿಸುವಂತಿದ್ದವು, ಅಗೌರವದಿಂದ ಕೂಡಿದ್ದವು ಎಂದು ಬರೆದುಕೊಂಡಿದ್ದಾರೆ.

ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಲು ಆರಂಭಿಸಿದಾಗ ತಾನು ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿಯ ದ್ವಿಚಕ್ರ ವಾಹನ ಸಂಖ್ಯೆ KA03 KQ6190 ಎಂದು ತಿಳಿಸಿರುವ ಅವರು, ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇಂತಹ ವರ್ತನೆಯನ್ನು ಯಾವುದೇ ಕಾರಣಕ್ಕೂ ಸಹಜವೆಂದು ಒಪ್ಪಿಕೊಳ್ಳಬಾರದು. ಮೌನವು ಅಪರಾಧಿಗಳಿಗೆ ಮತ್ತಷ್ಟು ಧೈರ್ಯ ನೀಡುತ್ತದೆ. ಸಾರ್ವಜನಿಕ ಸ್ಥಳಗಳು ಪ್ರತಿಯೊಬ್ಬರಿಗೂ ಸುರಕ್ಷಿತ ಹಾಗೂ ಗೌರವಯುತವಾಗಿರಬೇಕು ಎಂದು ಮಹಿಳೆ ತಮ್ಮ ಪೋಸ್ಟ್‌ನಲ್ಲಿ ತಿಳಿಸಿ, ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ; ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ: ಆರ್. ಅಶೋಕ್ ಆರೋಪ