ಬೆಂಗಳೂರಿಗೆ ಬರುವವರ ಗಮನಕ್ಕೆ...! Online Desk
ರಾಜ್ಯ

ಬೆಂಗಳೂರಿಗೆ ಬರುವವರ ಗಮನಕ್ಕೆ; ಮುಂದಿನ 8 ದಿನ ಈ ರಸ್ತೆ ಬಂದ್! ಪರ್ಯಾಯ ಮಾರ್ಗವೇನು?

ರಾಜಧಾನಿಯ ಗುಂಡಿಗಳಿಗೆ ಮುಕ್ತಿ ನೀಡಲು ಸರ್ಕಾರ ಮುಂದಾಗಿದ್ದು, ಅದರಂತೆ ಮುಂದಿನ 8 ದಿನಗಳ ಕಾಲ ಪೀಣ್ಯ ಎಲಿವೇಟೆಡ್ ಮೇಲ್ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿಯ ಗುಂಡಿಗಳಿಗೆ ಮುಕ್ತಿ ನೀಡಲು ಸರ್ಕಾರ ಮುಂದಾಗಿದ್ದು, ಅದರಂತೆ ಮುಂದಿನ 8 ದಿನಗಳ ಕಾಲ ಪೀಣ್ಯ ಎಲಿವೇಟೆಡ್ ಮೇಲ್ಸೇತುವೆಯಲ್ಲಿ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶ ಮಾಡಿದ್ದಾರೆ. ಹಾಗಾದರೆ, ಯಾವ ದಿನಗಳು ಮೇಲ್ಸೇತುವೆ ಬಂದ್? ಯಾವ ಸಮಯದಲ್ಲಿ ಬಂದ್? ಎನ್ನುವುದರ ಕುರಿತ ಮಾಹಿತಿ ಇಲ್ಲಿದೆ:

ಯಾವ ದಿನಗಳು ಬಂದ್?

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೀಣ್ಯ ಎಲಿವೇಟೆಡ್ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 27 ರಿಂದ ಆಗಸ್ಟ್ 5 ರವರೆಗೆ ರಾತ್ರಿ ಅವಧಿಯಲ್ಲಿ ಮಾತ್ರವೇ, ಬೆಂಗಳೂರು ನಗರಕ್ಕೆ ಬರುವ ಮಾರ್ಗದ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಯಾವ ಟೈಮ್ ನಲ್ಲಿ ಬಂದ್?

ಪ್ರಕಟಣೆಯ ಪ್ರಕಾರ, ಸಾಮಾನ್ಯ ದಿನಗಳಲ್ಲಿ ಅಂದ್ರೆ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 10:00 ಗಂಟೆಯಿಂದ ಬೆಳಿಗ್ಗೆ 5:00 ಗಂಟೆಯವರೆಗೆ ಹಾಗು ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರದವೇಳೆ ಮಧ್ಯರಾತ್ರಿ 12:00 ಗಂಟೆಯಿಂದ ಬೆಳಿಗ್ಗೆ 5:00 ಗಂಟೆಯವರೆಗೆ, ಪೀಣ್ಯ ಎಲಿವೇಟೆಡ್ ಮೇಲ್ಸೇತುವೆಯ ಕೆನ್ನಮೆಟಲ್ ವಿಡಿಯಾ ಅಪ್ಪರ್ ರಾಂಪ್‌ನಿಂದ ಎಸ್‌ಆರ್‌ಎಸ್ ಡೌನ್ ರಾಂಪ್‌ವರೆಗೆ (ಗೊರಗುಂಟೆಪಾಳ್ಯ ಜಂಕ್ಷನ್ ಬಳಿ) ಬೆಂಗಳೂರು ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ಏತನ್ಮಧ್ಯೆ, ಬೆಂಗಳೂರು ನಗರದಿಂದ ಹೊರಹೋಗುವ ಅಂದ್ರೆ ತುಮಕೂರು ಕಡೆಗೆ ಸಾಗುವ ವಾಹನಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ, ಸಂಚಾರ ಎಂದಿನಂತಿರುತ್ತದೆ.

ಪರ್ಯಾಯ ಮಾರ್ಗವೇನು?

ನೆಲಮಂಗಲ/ತುಮಕೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ಎಲ್ಲಾ ವಾಹನಗಳನ್ನು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಮೇಲ್ಸೇತುವೆ ಕೆಳಗಿನ ರಾಷ್ಟ್ರೀಯ ಹೆದ್ದಾರಿ-4 (NH-4) ರಸ್ತೆಗೆ ಇಳಿಯುವುದು. ನಂತರ ಅಲ್ಲಿಂದ ಸರ್ವೀಸ್ ರಸ್ತೆ ಮೂಲಕ 8ನೇ ಮೈಲಿ ತಲುಪುವುದು. ತದನಂತರ ದಾಸರಹಳ್ಳಿ ➔ ಜಾಲಹಳ್ಳಿ ಕ್ರಾಸ್ ➔ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ➔ ಎಸ್‌ಆರ್‌ಎಸ್ ಜಂಕ್ಷನ್ ಮಾರ್ಗವಾಗಿ ಗೊರಗುಂಟೆಪಾಳ್ಯ ತಲುಪಿ ಮುಂದೆ ಸಾಗಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ; ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ: ಆರ್. ಅಶೋಕ್ ಆರೋಪ